Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...