Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...