Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...