Homeಮುಖಪುಟಜಿ.ಎನ್. ಸಾಯಿಬಾಬಾ ಅವರನ್ನು ಹೀರೋ ಆಗಿ ನೋಡಬೇಕು: ಹೋರಾಟಗಾರ ಹರ್ಷ ಮಂದರ್

ಜಿ.ಎನ್. ಸಾಯಿಬಾಬಾ ಅವರನ್ನು ಹೀರೋ ಆಗಿ ನೋಡಬೇಕು: ಹೋರಾಟಗಾರ ಹರ್ಷ ಮಂದರ್

- Advertisement -
- Advertisement -

ಕಳೆದ ವಾರ ಶಸ್ತ್ರಚಿಕಿತ್ಸೆಯ ನಂತರದ ತೊಡಕುಗಳಿಂದ ಸಾವನ್ನಪ್ಪಿದ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರು ಮಾವೋವಾದಿ ಸಂಪರ್ಕ ಆರೋಪಿದ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ. ಅವರು ತಮ್ಮ ದೇಶದ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿರುವ ವ್ಯಕ್ತಿಯಾಗಿದ್ದು, ಅವರನ್ನು ಹೀರೋ ಆಗಿ ನೋಡಬೇಕು ಎಂದು ಸಾಮಾಜಿಕ ಹೋರಾಟಗಾರ ಹರ್ಷ್ ಮಂದರ್ ಹೇಳಿದ್ದಾರೆ.

ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ (ಎನ್‌ಪಿಆರ್‌ಡಿ) ದೆಹಲಿ ವಿಶ್ವವಿದ್ಯಾಲಯದ (ಡಿಯು) ಮಾಜಿ ಪ್ರೊಫೆಸರ್ ಅವರ ಸ್ಮಾರಕ ಸೇವೆಯಲ್ಲಿ, ಮಂದರ್ ಮತ್ತು ಇತರ ಕಾರ್ಯಕರ್ತರು ಸಾಯಿಬಾಬಾ ಅವರ ಸಾವು ಸಾಂಸ್ಥಿಕ ಕೊಲೆಯಾಗಿದೆ. ಜೈಲಿನಲ್ಲಿ ಅವರಿಗೆ ನೀಡಿದ ಕಳಪೆ ಸೇವೆಗಳಿಂದಾಗಿ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಆರೋಪಿಸಿದರು.

ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಮಂದರ್, ಸಾಯಿಬಾಬಾರವರು ತಮ್ಮ ವಿದ್ಯಾರ್ಥಿಗಳಿಂದ ಪ್ರೀತಿಪಾತ್ರರಾದ ಪ್ರಾಧ್ಯಾಪಕರಾಗಿದ್ದರು. ಅವರು ಅನ್ಯಾಯ ಮತ್ತು ಅಮಾನವೀಯತೆಯ ಬಗ್ಗೆ ಕಾಳಜಿವಹಿಸುವ ವ್ಯಕ್ತಿ. ಇದು ಆವರನ್ನು ಮಾವೋವಾದಿ ಎಂದು ಆರೋಪಿಸಲು ಕಾರಣವಾಯಿತು ಎಂದು ಅವರು ಹೇಳಿದರು.

“ಅವರು ಯಾವುದೇ ರೀತಿಯ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ” ಎಂದು ಅವರು ಹೇಳಿದರು.

ಸಂಪೂರ್ಣ ಕೋವಿಡ್-19 ಸಾಂಕ್ರಾಮಿಕ ಅವಧಿಯನ್ನು ಒಳಗೊಂಡಂತೆ ಸಾಯಿಬಾಬಾ ಅವರು 10 ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ ಎಂದು ಮಂದರ್ ಹೇಳಿದರು.

“ಇದ್ಯಾವುದೂ ಸಾಯಿಬಾಬಾರವರ ನಂಬಿಕೆಯನ್ನು ಮುರಿಯಲಿಲ್ಲ. ಆದರೆ, ಅವರ ದೇಹವನ್ನು ಹಾಳುಮಾಡಿತು. ಅವರು ಎಲ್ಲ ಅಪರಾಧಗಳಿಂದ ಬಿಡುಗಡೆ ಹೊಂದಿದರು. ಆದರೆ, ಅವರ ದೇಹವು ಅಂತಿಮವಾಗಿ ಸಾವಿಗೆ ಒಪ್ಪಿಗೆ ನೀಡಿತು” ಎಂದು ಅವರು ಹೇಳಿದರು.

“ಸಾಯಿಬಾಬಾರಂತಹ ವ್ಯಕ್ತಿಗಳನ್ನು ಅವರ ಧೈರ್ಯಕ್ಕಾಗಿ ಹೀರೋಗಳು ಮತ್ತು ರೋಲ್ ಮಾಡೆಲ್ ಆಗಿ ನೋಡಬೇಕಾದ ಕಾಲದಲ್ಲಿ ನಾವು ಬದುಕುತ್ತಿದ್ದೇವೆ. ಬದಲಾಗಿ, ವ್ಯವಸ್ಥೆಯು ತುಂಬಾ ಹೆದರುತ್ತದೆ, ಅದು ಅವರನ್ನು ಜೈಲಿನ ಗೋಡೆಗಳ ಹಿಂದೆ ಇರಿಸುತ್ತದೆ” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಾಯಿಬಾಬಾರವರು ವರ್ಷದ ಆರಂಭದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಕ್ಲಿಪ್‌ನಲ್ಲಿ, ಸಾಯಿಬಾಬಾ ಅವರು ಜೈಲಿಗೆ ಹೋಗುವ ಮೊದಲು ತಮ್ಮ ಪೋಲಿಯೊ ಸ್ಥಿತಿಯನ್ನು ಹೊರತುಪಡಿಸಿ ಯಾವುದೇ ಕಾಯಿಲೆ ಇರಲಿಲ್ಲ ಎಂದು ಹೇಳುವುದನ್ನು ಕಾಣಬಹುದು.

ಸಾಯಿಬಾಬಾ ಅವರನ್ನು ಕೈಹಿಡಿದು ಎಳೆದೊಯ್ದ ಕಾರಣ ಅದು ಊದಿಕೊಂಡಿತ್ತು. ಪೊಲೀಸರು ಅವರನ್ನು ಬಂಧಿಸಿದಾಗ ಅವರ ಎಡಗೈಗೆ ಗಾಯವಾಗಿ, ಅವರ ತೋಳಿಗೆ ದೀರ್ಘಕಾಲ ಚಿಕಿತ್ಸೆ ನೀಡದ ಕಾರಣ ಅದು ಮತ್ತಷ್ಟು ಉಲ್ಬಣಗೊಂಡಿತ್ತು.

ಸಾಯಿಬಾಬಾರನ್ನು ಬಂಧಿಸಿದಾಗ ಅವರನ್ನು “ಗೋಣಿಚೀಲದಂತೆ ಎಸೆಯಲಾಯಿತು” ಎಂದು ದೆಹಲಿ ಯೂನಿವರ್ಸಿಟಿ ನಿವೃತ್ತ ಪ್ರಾಧ್ಯಾಪಕ ನಂದಿತಾ ನರೇನ್ ಹೇಳಿದ್ದಾರೆ.

“ಅತ್ಯಲ್ಪ ಅವಧಿಯಲ್ಲಿ ಅವರಿಗೆ 10 ವರ್ಷಗಳ ಶಿಕ್ಷೆ ವಿಧಿಸಲಾಯಿತು. ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಅವರಿಗೆ ವೈದ್ಯಕೀಯ ಜಾಮೀನು ನೀಡಲಾಯಿತು. 2017 ರಲ್ಲಿ, ಅವರು ವಿದೇಶದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾದಾಗ, ಅವರಿಗೆ ಪಿತ್ತಕೋಶದ ಕಲ್ಲುಗಳು ಮತ್ತು ಅವರ ಮೇದೋಜ್ಜೀರಕ ಗ್ರಂಥಿಯು ಪರಿಣಾಮ ಬೀರಿದೆ ಎಂದು ರೋಗನಿರ್ಣಯ ಮಾಡಲಾಯಿತು” ಎಂದು ಅವರು ವಿವರಿಸಿದರು.

“ಅವರಿಗೆ ಪ್ಯಾಂಕ್ರಿಯಾಟೈಟಿಸ್ ಇತ್ತು. ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. 2017ರಲ್ಲಿ ಮಾಡಬೇಕಾಗಿದ್ದ ಶಸ್ತ್ರಚಿಕಿತ್ಸೆಯನ್ನು 2024ರಲ್ಲಿ ಮಾಡಲಾಗಿದೆ” ಎಂದು ನರೇನ್ ಹೇಳಿದ್ದಾರೆ. “ಇದು ಸಾಂಸ್ಥಿಕ ಕೊಲೆ ಎಂದು ನಾನು ನಂಬುತ್ತೇನೆ” ಎಂದು ಅವರು ಹೇಳಿದರು.

ಡಿಯುನ ದೃಷ್ಟಿಹೀನ ಇತಿಹಾಸ ಪ್ರಾಧ್ಯಾಪಕ ವಿಕಾಸ್ ಗುಪ್ತಾ ಮಾತನಾಡಿ, “ಸಾಯಿಬಾಬಾರವರ ಕಿರುಕುಳ ಪ್ರಾರಂಭವಾದಾಗ, ಯಾರೂ ಅವರ ಬೆಂಬಲಕ್ಕೆ ಬರಲಿಲ್ಲ” ಎಂದು ಹೇಳಿದರು.

“ದಾಳಿಗಳ ಮುಂಚೆಯೇ, ಸಾಯಿಬಾಬಾರವರ ಮನೆಯನ್ನು ಖಾಲಿ ಮಾಡಲು ಡಿಯು ನಿರ್ಧರಿಸಿತು. ವಿಕಲಾಂಗ ವ್ಯಕ್ತಿಗಳ ಮುಖ್ಯ ಆಯುಕ್ತರ (ಸಿಸಿಡಿಪಿ) ಕಛೇರಿಯಿಂದ ಯಾವುದೇ ಸಹಾಯ ಬಂದಿಲ್ಲ” ಎಂದರು.

ಇದನ್ನೂ ಓದಿ; ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...