Homeಕರ್ನಾಟಕಗದಗ: ತನ್ನ ಮನೆಯಲ್ಲೆ ಬಾಡಿಗೆಗೆ ವಾಸವಿರುವ ಸವರ್ಣೀಯ ವ್ಯಕ್ತಿಯಿಂದ ದಲಿತ ವಿಧವೆಯ ಮೇಲೆ ಹಲ್ಲೆ

ಗದಗ: ತನ್ನ ಮನೆಯಲ್ಲೆ ಬಾಡಿಗೆಗೆ ವಾಸವಿರುವ ಸವರ್ಣೀಯ ವ್ಯಕ್ತಿಯಿಂದ ದಲಿತ ವಿಧವೆಯ ಮೇಲೆ ಹಲ್ಲೆ

- Advertisement -
- Advertisement -

ದಲಿತ ವಿಧವೆ ಮಹಿಳೆಯ ಮನೆಯಲ್ಲೇ ಬಾಡಿಗೆಗೆ ವಾಸಿಸುತ್ತಿರುವ ಸವರ್ಣೀಯ ಸಮುದಾಯದ ವ್ಯಕ್ತಿಯೊಬ್ಬ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದು ತಡವಾಗಿ ವರದಿಯಾಗಿದೆ. ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನರಗುಂದ ಠಾಣೆಯ ಇನ್ಸ್‌ಪೆಕ್ಟರ್‌ ಜಯಂತ್‌ ಗೌಳಿ ಅವರು ನಾನುಗೌರಿ.ಕಾಂಗೆ ಶುಕ್ರವಾರ ಹೇಳಿದ್ದಾರೆ.

ನರಗುಂದದ ಎಸ್‌‌ಟಿ ಸಮುದಾಯಕ್ಕೆ ಸೇರಿರುವ ಸಂಗೀತ ಎಂಬ ವಿಧವೆ ಮಹಿಳೆಯ ಮೇಲೆ, ಅವರ ಮನೆಯಲ್ಲೇ ಬಾಡಿಗೆಗೆ ವಾಸವಿರುವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಚಂದ್ರೇಗೌಡ ಕಣ್ಣೂರು ಎಂಬ ವ್ಯಕ್ತಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದಾನೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಮಹಿಳೆಯು ತನಗೆ ನ್ಯಾಯ ಕೊಡಿಸುವಂತೆ ಸಾರ್ವಜನಿಕವಾಗಿ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಸಂಗೀತ ಅವರ ಗಂಡ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇದೀಗ ಅವರು ತನ್ನ ಇಬ್ಬರು ಮಕ್ಕಳೊಂದಿಗೆ ತನ್ನ ಗಂಡನ ಮನೆಯಲ್ಲಿ ವಾಸವಾಗಿದ್ದಾರೆ. ಈ ಹಿಂದೆ ಅತಿಥಿ ಶಿಕ್ಷಕಿಯಾಗಿದ್ದ ಕೆಲಸ ಮಾಡುತ್ತಿದ್ದ ಸಂಗೀತ ಅವರು ಪ್ರಸ್ತುತ ನಿರುದ್ಯೋಗಿಯಾಗಿದ್ದಾರೆ.

ಇದನ್ನೂ ಓದಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಆರೋಪಿ ಚಂದ್ರೇಗೌಡ ಕಳೆದ ತಿಂಗಳು ಕೂಡಾ ತನ್ನ ಮೇಲೆ ಹಲ್ಲೆ ನಡೆಸಿದ್ದನು ಎಂದು ಸಂಗೀತಾ ಹೇಳಿದ್ದಾರೆ. ಆ ಸಮಯದಲ್ಲಿ ಪೊಲೀಸರಿಗೆ ದೂರು ನೀಡಿದ್ದರೂ ಅದನ್ನು ಪ್ರಕರಣ ದಾಖಲಿಸಿರಲಿಲ್ಲ. ನನ್ನನ್ನೇ ಅವಮಾನ ಮಾಡಿ ವಾಪಾಸು ಕಳುಹಿಸಿದ್ದರು. ಆ ಸಮಯದಲ್ಲಿಗ ಗಾಯ ಕೂಡಾ ಆಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಇದೀಗ ಮತ್ತೆ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದ್ದು, ವಿಡಿಯೊವನ್ನು ಕೂಡಾ ಸಂಗೀತ ಅವರು ನಾನುಗೌರಿ.ಕಾಂಗೆ ಕಳುಹಿಸಿದ್ದಾರೆ.

ವಿಡಿಯೊದಲ್ಲಿ ಆರೋಪಿ ಚಂದ್ರೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯೊದು ಸೇರಿದಂತೆ, ಅವರ ಮಕ್ಕಳ ಮುಂದೆಯೆ ಅವರ ಮೇಲೆ ದೈಹಿಕ ಹಲ್ಲೆ ಕೂಡಾ ನಡೆಸಿರುವುದು ದಾಖಲಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಂಗೀತ ಅವರು, “ನನ್ನ ಗಂಡನ ಮನೆಯವರಿಗೆ ಸುಮಾರು ಐದು ಮನೆಗಳು ಇವೆ. ನಾನು ಗಂಡನಿಗೆ ಸೇರಿದ ಮನೆಯಲ್ಲಿ ವಾಸವಿದ್ದೇನೆ. ಆದರೆ ಅತ್ತೆ ಮತ್ತು ನಾದಿನಿ ಅಲ್ಲಿಂದ ತೆರಳುವಂತೆ ಹೇಳುತ್ತಿದ್ದಾರೆ. ನಾನು ಅವರಲ್ಲಿ ಇದೊಂದು ಮನೆ ನನಗೆ ಕೊಡಿ ಎಂದು ಕೇಳುತ್ತಾ ಬಂದಿದ್ದೇನೆ. ಆದರೆ ಅವರು ನಮ್ಮದೇ ಮತ್ತೊಂದು ಮನೆಯಲ್ಲಿ ಬಾಡಿಗೆಗೆ ಇರುವ ಚಂದ್ರೇಗೌಡ ಅವರಿಗೆ ಕುಮ್ಮಕ್ಕು ನೀಡಿ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ಸಂಗೀತ ಅವರ ಗಂಡ ತೀರಿಹೋದ ನಂತರ ಅವರ ಅತ್ತೆ ಮತ್ತು ಅವರ ನಾದಿನಿ ಅವರಿಗೆ ಕಿರುಕುಳ ನೀಡುತ್ತಲೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನು ಇಟ್ಟುಕೊಂಡು ನಿರುದ್ಯೋಗಿ ಆಗಿರುವ ನಾನು ಮನೆ ಬಿಟ್ಟು ಎಲ್ಲಿಗೆ ಹೋಗಲಿ ಎಂದು ಅವರು ಪ್ರಶ್ನಿಸಿದ್ದಾರೆ.

ಚಂದ್ರೇಗೌಡ, ಅವರ ಅಕ್ಕ, ತಂಗಿ, ಅವರ ತಾಯಿ ಮೇಲೆ ದೂರು ನೀಡಿದ್ದಾಗಿ ಸಂಗೀತ ಹೇಳಿದ್ದಾರೆ. ಸಂತ್ರಸ್ತೆ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದಲಿತ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ನರಗುಂಡ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌‌ ಜಯಂತ್‌ ಗೌಳಿ ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜಯಂತ್ ಅವರು,“ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದರ ವಿರುದ್ದ ದಲಿತ ದೌರ್ಜನ್ಯದ ಅಡಿಯಲ್ಲಿ ಎಫ್‌ಐಆರ್‌‌ ದಾಖಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಇನ್ನೂ ಬಂಧನ ನಡೆದಿಲ್ಲ. ತನಿಖೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...