Homeಕರ್ನಾಟಕಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

ಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದಾರೆ

- Advertisement -
- Advertisement -

ವಿದ್ಯಾರ್ಥಿಗಳಿಗೆ ಪ್ರವಾದಿ ಮುಹಮ್ಮದ್ ಅವರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿದ ಗದಗ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು ಥಳಿಸಿರುವ ಘಟನೆ ಮಂಗಳವಾರ ನಡೆದಿತ್ತು. ಇದಾದ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, ‘ಅಮಾನತು ಮಾಡುವಂತಹ ದೊಡ್ಡ ತಪ್ಪು ಅವರು ಮಾಡಿಲ್ಲ’ ಎಂದು ಹೇಳಿದ್ದಾರೆ.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿಗಳ ಕೈಬರಹವನ್ನು ಸುಧಾರಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದೆ. ಪ್ರತಿ ತಿಂಗಳು ಕನಿಷ್ಠ ಒಂದೆರಡು ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆಯೂ ಕನಕದಾಸ, ಪುರಂದರ ದಾಸ ಮತ್ತಿತರ ವ್ಯಕ್ತಿಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ಇಸ್ಲಾಂ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದು ಸುಳ್ಳು ಆರೋಪ” ಎಂದು ಅಬ್ದುಲ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

ಘಟನೆ ಕುರಿತು ತನಿಖೆಗೆ ಆದೇಶಿಸಿರುವುದಾಗಿ ಗದಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ ಎಂ ಬಸವಲಿಂಗಪ್ಪ ತಿಳಿಸಿ, ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಹೇಳಿದ್ದರು.

“ಸುಮಾರು 43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಾಲ್ಮೀಕಿ ಜಯಂತಿ, ಕನಕ ಜಯಂತಿ ಮತ್ತಿತರ ಕಾರ್ಯಕ್ರಮಗಳನ್ನು ಸಹ ಆಚರಿಸಿದ್ದೇವೆ ಎಂದು ಮುಖ್ಯೋಪಾಧ್ಯಾಯರು ಸಮರ್ಥಿಸಿಕೊಂಡಿದ್ದಾರೆ. ಆದರೆ, ಈ ರೀತಿ ಪ್ರಬಂಧ ಸ್ಪರ್ಧೆಗಳನ್ನು ನಡೆಸಲು ಸರ್ಕಾರದ ಆದೇಶವಿದ್ದರೂ ಈ ಪ್ರಕರಣದಲ್ಲಿ ಯಾವುದೇ ನಿರ್ದೇಶನ ನೀಡಿಲ್ಲ’’ ಎಂದು ಬಸವಲಿಂಗಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

ಇದೀಗ, ಸರ್ಕಾರದ ನಿರ್ದೇಶನ ಇಲ್ಲದಿದ್ದರೂ, ಗೋಪ್ಯವಾಗಿ ಪ್ರವಾದಿ ಮೊಹಮ್ಮದರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಅಬ್ದುಲ್‌‌ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್‌.ಬಿರಾದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

“ಶಾಲೆಯ ಒಟ್ಟು 43 ವಿದ್ಯಾರ್ಥಿಗಳಿಗೆ ‘ಮಹಮ್ಮದ್ (ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ (ಸ)’ ಪುಸ್ತಕವನ್ನು ತರಗತಿಯಲ್ಲಿ ವಿತರಿಸಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರಿಗೂ ಮಾಹಿತಿ ನೀಡದೇ ಪ್ರಬಂಧ ಸ್ಪರ್ಧೆ ನಡೆಸಿದ್ದಾರೆ. ಬಹುಮಾನ ನೀಡುವ ಆಮಿಷವನ್ನೂ ಒಡ್ಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾಡಿರುವುದರಿಂದ ಹಾಗೂ ಪ್ರಾಥಮಿಕ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ’’ ಎಂದು ಅವರು ತಿಳಿಸಿದ್ದಾಗಿ ಪ್ರಜಾವಾಣಿ ಹೇಳಿದೆ.

“ಯಾರೋ ಒಬ್ಬರು ಶಾಲೆಗೆ ಬಂದು ವಿಜೇತರಿಗೆ ₹5,000 ನೀಡುವುದಾಗಿ ಹೇಳಿದ್ದಾರೆ. ಅದಕ್ಕಾಗಿ ಮುಖ್ಯ ಶಿಕ್ಷಕ ಸ್ಪರ್ಧೆ ನಡೆಸಲು ಒಪ್ಪಿಕೊಂಡಿದ್ದಾರೆ. ಶಿಕ್ಷಕರಾಗಿ ಯಾವುದೇ ಒಂದು ಧರ್ಮದ ಪ್ರಚಾರಕ್ಕೆ ಅವಕಾಶ ನೀಡಬಾರದು. ಈ ಮೂಲಕ ಯುವ ಮನಸ್ಸುಗಳಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ” ಎಂದು ಶ್ರೀರಾಮಸೇನೆಯ ರಾಜು ಖಾನಪ್ಪನವರ್ ಆರೋಪಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ತುಮಕೂರು: ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ; 11 ಶಿಕ್ಷಣಾಧಿಕಾರಿಗಳ ಬಂಧನ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣಗೊಳಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ? ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಕೇಳಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದೆ. ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು. ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ಹೇಳಿದರು.

ಇದನ್ನೂ ಓದಿ: ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

“ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಈ ಹಿಂದಿನಿಂದಲೂ ಬೇರೆ ಬೇರೆ ಸಂಸ್ಥೆಗಳಿಂದ ಪುಸ್ತಕಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳನ್ನು ಮಾಡಿಸಿ ಅವರ ಸರ್ವಾಂಗೀಣ ಅಭಿವೃದ್ಧಿ ಆಗಲಿ ಎಂದು ನಾವು ಹೇಳುತ್ತೇವೆ. ಎಷ್ಟೊ ಸಂದರ್ಭದಲ್ಲಿ ಎಷ್ಟೊ ಹಿಂದೂ ಸಂಘಟನೆಗಳು ಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ, ಅವರಿಗೆ ಬಹುಮಾನ ನೀಡಿವೆ ಅಲ್ಲವೆ? ಹೀಗಿರುವಾಗ ಪ್ರವಾದಿ ಬಗ್ಗೆ ಪ್ರಬಂಧ ಬರೆದಿದ್ದನ್ನ ಮಾತ್ರ ಪ್ರತ್ಯೇಕವಾಗಿ ನೋಡುವಂತಹ ಅವಶ್ಯಕತೆ ಇರಲಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಂದು ಧರ್ಮಿಯರನ್ನು ನಿರ್ಧಿಷ್ಟವಾಗಿ ಗುರಿ ಮಾಡಿರುವುದರಿಂದ ಇದು ತಪ್ಪು ಎಂದು ಕಾಣುತ್ತದೆ. ಶಿಕ್ಷಣದಲ್ಲಿ ಈ ತರದ ಹಸ್ತಕ್ಷೇಪಗಳು ಸರಿಯಲ್ಲ. ಹೀಗೆ ಮಾಡುವುದಾದರೆ ಎಲ್ಲಾ ಹೊರಗಿನ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರವಾದಿ ಮುಹಮ್ಮದ್ ರ ಬಗ್ಗೆ ಪ್ರಬಂಧ ಬರೆದರೆ ಮತ ಪ್ರಚಾರವಾದರೆ…ನಮ್ಮ ಸರ್ಕಾರಿ ಪ್ರೌಢಶಾಲೆ ಯಲ್ಲಿ ಪ್ರತಿ ವರ್ಷ ಜನ್ಮಾಷ್ಟಮಿ ಗೆ ಹತ್ತಿರದ ಆಶ್ರಮದಿಂದ ಶ್ರೀಕೃಷ್ಣ ನಾ ಚಿತ್ರ ಬಿಡಿಸುವ ಸ್ಪರ್ದೆ….. ಮೈ ಸೂರಿನ ಒಂದು ಆಶ್ರಮದಿಂದ ವಿವೇಕಾನಂದರ ಬಗ್ಗೆ ಹಿಂದೂ ಧರ್ಮದ ಬಗ್ಗೆ… ಶಾಲೆಯ ವಿದ್ಯಾರ್ಥಿ ಗಳಿಗೆ ಹಾಗೂ ಶಿಕ್ಷಕರಿಗೆ ಪುಸ್ತಕ ಗಳನ್ನು ನೀಡಿ ಪರೀಕ್ಷೆ ಬೆರೆಸಿ….ಅದಕ್ಕೆ ಬಹುಮಾನವಾಗಿ… ಹಿಂದೂ ಧರ್ಮದ ಪುಸ್ತಕ ವನ್ನೇ ನೀಡುತ್ತಾರೆ ಅದರ ಬಗ್ಗೆ ನಮಗೆ ಯಾರಿಗೂ ತಕರಾರಿಲ್ಲ…. ಅಷ್ಟೇ ಅಲ್ಲ ಅರ್ದ ದಷ್ಟು ಮುಸ್ಲೀಂ ಸಂಖ್ಯೆ ಇರುವ ಶಾಲೆಯಲ್ಲಿ…. ಹಿಂದೂ ಧರ್ಮದ ಶ್ಲೋಕಗಳನ್ನು ಹೇಳಿಸುತ್ತಾರೆ
    … ಇಲ್ಲಿಯೂ ಯಾರಿಗೂ ತಕರಾರಿಲ್ಲ…. ಆದರೆ ಮುಹಮ್ಮದ್ ರ ಪ್ರಬಂಧ ಬರೆಸಿದ ತಕ್ಷಣ ಮತ ಪ್ರಚಾರ ಹೇಗಾಗುತ್ತದೆ,..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....