HomeಅಂಕಣಗಳುKarnataka against SIRಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

- Advertisement -
- Advertisement -

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಡಾ. ಇಸಾಬೆಲ್ಲ ಝೇವಿಯರ್ ಹೇಳಿದರು.

ಗದಗದ ಪತ್ರಿಕಾ ಭವನದಲ್ಲಿ ಬುಧವಾರ (ಜೂನ.17) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಆರ್‌ ಎಂಬುವುದು ಹೆಸರಿಗೆ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿರಬಹುದು. ಆದರೆ, ಇದರ ಹಿಂದಿನ ಉದ್ದೇಶ ಬೇರೆಯದ್ದೇ ಇದೆ. ಇದು ಆರ್‌ಎಸ್‌ಎಸ್‌-ಸಂಘಪರಿವಾರದ ಹಿಡನ್‌ ಅಜೆಂಡಾದ ಜಾರಿ ಪ್ರಕ್ರಿಯೆ ಎಂದು ಟೀಕಿಸಿದರು.

ಎಸ್‌ಐಆರ್‌ ಪ್ರಕ್ರಿಯೆ ಸಂಪೂರ್ಣವಾಗಿ ಒಪ್ಪುವಂತದಲ್ಲ. ನಾವು ಮತದಾರರ ಪಟ್ಟಿಯ ಪರಿಷ್ಕರಣೆಯ ವಿರುದ್ದವಿಲ್ಲ, ವಿಶೇಷ ಪರಿಷ್ಕರಣೆಯನ್ನು ವಿರೋಧಿಸುತ್ತೇವೆ. ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಕೋಟ್ಯಾಂತರ ಮತದಾರರನ್ನು ಹೊರಗಿಡುವ ಕುತಂತ್ರವನ್ನು ಒಪ್ಪುವುದಿಲ್ಲ ಎಂದರು.

ಎಸ್‌ಐಆರ್‌ ಹೆಚ್ಚು ಪರಿಣಾಮ ಎದುರಿಸುವವರು ನಮ್ಮ ಹೆಣ್ಣು ಮಕ್ಕಳು. ಅವರಿಗೆ ತಂದೆಯ ಮನೆಯಲ್ಲಿ ಒಂದು ಹೆಸರಿದ್ದರೆ, ಮದುವೆಯಾದ ಮೇಲೆ ಮತ್ತೊಂದು ಹೆಸರಿರುತ್ತದೆ. ಎಸ್‌ಐಆರ್‌ನಲ್ಲಿ ಒಂದು ಸ್ಲೆಲ್ಲಿಂಗ್ ತಪ್ಪಿದರೂ ನಾವು ಮತದಾರರ ಪಟ್ಟಿಯಿಂದ ಹೊರ ಬೀಳುತ್ತೇವೆ. ಹೀಗಿರುವಾಗ ಹೆಸರು ಬದಲಿಸುವ ಹೆಣ್ಣು ಮಕ್ಕಳ ಗತಿಯೇನು ಎಂದು ಪ್ರಶ್ನಿಸಿದರು.

ಎಸ್‌ಐಆರ್‌ನಲ್ಲಿ ಹೆಚ್ಚು ಸಮಸ್ಯೆಗೆ ಸಿಲುಕುವವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಹೆಣ್ಣು ಮಕ್ಕಳು. ಅವರಲ್ಲಿ ಚುನಾವಣಾ ಆಯೋಗ ಕೇಳಿದ ದಾಖಲೆಗಳು ಇರಲು ಸಾಧ್ಯವೇ ಇಲ್ಲ. ಹಾಗಾಗಿ, ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುವುದಾದರೆ ನಾವು ಮುಂದಿಟ್ಟಿರುವ ಬೇಡಿಕೆಗಳಿಗೆ ಆಯೋಗ ಸ್ಪಂದಿಸಬೇಕು. ಒಬ್ಬರೇ ಒಬ್ಬರು ಅರ್ಹರು ಮತದಾರರ ಪಟ್ಟಿಯಿಂದ ಹೊರ ಬೀಳದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದರು.

ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾದ ಸಂಚಾಲಕ ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವುದು ಖಚಿತ ಎಂದು ಕಳವಳ ವ್ಯಕ್ತಪಡಿಸಿದರು.

ಇಲ್ಲದ ದಾಖಲೆಗಳನ್ನು ಕೇಳಿ, ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಹೊಸ ನಿಯಮಗಳ ಮೂಲಕ ಲಕ್ಷಾಂತರ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ. ಎಸ್‌ಐಆರ್ ಮೂಲಕ ಚುನಾವಣಾ ಆಯೋಗ ನಮ್ಮ ಪೌರತ್ವ ಪರಿಶೀಲನೆಗೆ ಇಳಿದಿದೆ. ಪೌರತ್ವ ನಿರ್ಣಯಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಹಾಗಾಗಿ, ಈ ಪ್ರಕ್ರಿಯೆ ಒಪ್ಪುವಂತದಲ್ಲ ಎಂದರು.

ನುಸುಳುಕೋರರನ್ನು ಹೊರಗೆ ಹಾಕುತ್ತೇವೆ ಎಂಬ ನೆಪ ಹೇಳಿ ಎಸ್‌ಐಆರ್‌ ನಡೆಸುತ್ತಿದ್ದಾರೆ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಇವರೆಲ್ಲ ನುಸುಳುಕೋರರ ಎಂದು ಪ್ರಶ್ನಿಸಿದರು.

ಮೈ ಓಟ್ ಮೈ ರೈಟ್ ಆಂದೋಲನದ ನಾಯಕ ಆರಿಫುಲ್ಲಾ ಮಾತನಾಡಿ, ಚುನಾವಣಾ ಆಯೋಗದ ಮುಂದೆ ಜನ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಬೇಕು. ಜನರ ಮತದಾನದ ಹಕ್ಕನ್ನು ಉಳಿಸುವ ಕೆಲಸವನ್ನು ಆಯೋಗ ಮಾಡಬೇಕು. ರಾಜ್ಯ ಸರ್ಕಾರ ಕೂಡ ತ್ವರಿತ ಗತಿಯಲ್ಲಿ ಜನರಿಗೆ ದಾಖಲೆಗಳನ್ನು ನೀಡಿ ಅವರ ಮತದಾನದ ಹಕ್ಕನ್ನು ಉಳಿಸುವ ಕೆಲಸ ಮಾಡಬೇಕು. ಆಯೋಗದ ಮೇಲೆ ಒತ್ತಡ ಹೇರಲು ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದೇವೆ. ಆಯೋಗ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಗದಗ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಜುನೈದ್, ಸಂವಿಧಾನ ಸಂರಕ್ಷರ ಪಡೆಯ ಸರೋವರ್ ಬೆಂಕಿಕೆರೆ, ಗದಗ-ಬೆಟಗೇರಿ ಅಂಜುಮಾನ್ ಎ ಇಸ್ಲಾಮಿ ಅಧ್ಯಕ್ಷ ಅನ್ವರ್ ಬಾಗೇವಾಡಿ, ಸಾಮಾಜಿಕ ಕಾರ್ಯಕರ್ತ ಮುತ್ತು ಇದ್ದರು.

ಸುದ್ದಿಗೋಷ್ಠಿಗೂ ಮುನ್ನ ಎಸ್‌ಐಆರ್ ವಿರೋಧಿ ಜನಜಾಗೃತಿ ತಂಡ ಗದಗ-ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿತು. ಸ್ಥಳೀಯರ ಮುಖಂಡರು ಈ ವೇಳೆ ಸಾಥ್ ನೀಡಿದರು.

ಸುದ್ದಿಗೋಷ್ಠಿ ಬಳಿಕ ಜಾಥಾ ತಂಡ ಬೆಟಗೇರಿಯ ಸಂತ ಇಗ್ನೇಷಿಯಸ್ ಲೊಯೋಲಾ ಚರ್ಚ್‌ನಲ್ಲಿ ಫಾದರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಸಂಜೆ 6 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಮುದಾಯ ಸಂಘಟನೆಗಳ ಮುಖಂಡರೊಂದಿಗೆ ಜಾಥಾ ತಂಡದ ನಾಯಕರು ಸಭೆ ನಡೆಸಿದರು. ಎಸ್‌ಐಆರ್ ವಿಚಾರದಲ್ಲಿ ಬೀದಿಗಿಳಿದು ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...