Homeಕರ್ನಾಟಕಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ 8 ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.

8 ಶಾಲಾ ವಿದ್ಯಾರ್ಥಿನಿಯರಲ್ಲಿ, ನಾಲ್ವರು ಬಾಲಕಿಯರಿಗೆ ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಕಾರಣ ಅವರ ಸ್ಥಿತಿ ಗಂಭೀರವಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್) ಗೆ ಸ್ಥಳಾಂತರಿಸಲಾಗಿದ್ದು, ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂತ್ರಸ್ತರ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ದುಷ್ಕರ್ಮಿಗಳ ತಂಡಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.

ಶಾಲಾ ಬಾಲಕಿಯರು ಇಂದು ಪರೀಕ್ಷೆ ಬರೆಯಬೇಕಾಗಿದ್ದರಿಂದ ಲಕ್ಷ್ಮೇಶ್ವರ ಪಟ್ಟಣದ ಸುವರ್ಣಗಿರಿ ತಾಂಡಾ ಬಳಿಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಶಾಲೆಗೆ ಹೋಗಲು ಕಾಯುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳ ಗುಂಪೊಂದು ಬಸ್ ನಿಲ್ದಾಣದ ಬಳಿ ನಿಲ್ಲಿಸಿ, ಬಾಲಕಿಯರ ಮೇಲೆ ಬಣ್ಣಗಳನ್ನು ಸುರಿಯಲು ಪ್ರಾರಂಭಿಸಿತು. ಶಾಲಾ ಬಸ್ ಸಮಯಕ್ಕೆ ಸರಿಯಾಗಿ ಬಂದಿದ್ದರಿಂದ ಹುಡುಗಿಯರು ಅದನ್ನು ಹತ್ತುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಆ ಗ್ಯಾಂಗ್ ಬೈಕ್‌ಗಳಲ್ಲಿ ಬಸ್ ಅನ್ನು ಬೆನ್ನಟ್ಟಿ, ವಾಹನ ಹತ್ತಿ, ಏಳು ಶಾಲಾ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು, ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಎರಚಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಬಣ್ಣವು ಹಸುವಿನ ಸಗಣಿ, ಮೊಟ್ಟೆ, ಫಿನಾಯಿಲ್ ಮತ್ತು ಬಣ್ಣಗಳ ಮಿಶ್ರಣವನ್ನು ಹೊಂದಿತ್ತು ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಸುರಿದಾಗ ತಿಳಿಯದೆಯೇ ಸಣ್ಣ ಪ್ರಮಾಣದಲ್ಲಿ ಅದನ್ನು ಸೇವಿಸಿದರು, ಇದರಿಂದಾಗಿ ಅವರಿಗೆ ಉಸಿರಾಟದ ತೊಂದರೆ ಮತ್ತು ಇತರ ಲಕ್ಷಣಗಳು ಕಂಡುಬಂದವು ಅಸ್ಪತ್ರೆಯ ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳು ಅಸ್ವಸ್ಥರಾದರು ಮತ್ತು ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿನ ದೃಶ್ಯಗಳು ಹೃದಯ ವಿದ್ರಾವಕವಾಗಿದ್ದವು, ಹುಡುಗಿಯರು ಉಸಿರಾಡಲು ಕಷ್ಟಪಡುತ್ತಿದ್ದರು ಮತ್ತು ತೀವ್ರ ಎದೆನೋವಿನಿಂದ ಬಳಲುತ್ತಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೋಷಕರಿಗೆ ಭರವಸೆ ನೀಡಿದರು.

ಆರೋಪಿಗಳು ಬೈಕ್‌ಗಳಲ್ಲಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಸ್ಥಳೀಯರು ಮತ್ತು ಶಾಲಾ ಬಸ್‌ನಲ್ಲಿದ್ದ ಇತರ ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ. ಪ್ರಕರಣದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಹೋಳಿ ಹಬ್ಬ: ಬಣ್ಣ ಹಚ್ಚಿಸಿಕೊಳ್ಳುವುದನ್ನು ನಿರಾಕರಿಸಿದ ವ್ಯಕ್ತಿಯ ಹತ್ಯೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...