Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...