Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...