Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....