Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...