Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....