Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...