Homeಚಳವಳಿಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

- Advertisement -
- Advertisement -

ದಟ್ಟ ಕವಿದ ಮೋಡ, ಮಳೆಗಾಳಿ. ಬದಲಾವಣೆಗೆ ಮುನ್ಸೂಚನೆ ನೀಡುವಂತಹ ವಾತಾವರಣ. ಹೋರಾಟದ ಕಿಚ್ಚನ್ನು ಹೊತ್ತು ತಂದ ಹೋರಾಟಗಾರರು… ಇಂತಹ ಪರಿಸರದಲ್ಲಿ ಹಾರಾಡಿದ್ದು ಹಸಿರುಶಾಲು, ಕೇಳಿಸಿದ್ದು ಉಳುವ ಯೋಗಿ ನೋಡಲ್ಲಿ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆ..

ಬಂಡಾಯದ ನೆಲ ನರಗುಂದದಲ್ಲಿ ಬುಧವಾರ ಬೆಳಗಿನಿಂದಲೇ ಹಸಿರು ಶಾಲುಗಳ ಸಂಚಲನ. 41 ವರ್ಷಗಳ ಹಿಂದೆ ತಮ್ಮ ಹಕ್ಕುಗಳಿಗೆ, ಸರ್ಕಾರದ ದಬ್ಬಾಳಿಕೆಯ ವಿರುದ್ಧ ಸಿಡಿದು ಜೀವ ತ್ಯಾಗ ಮಾಡಿದ ರೈತರ ನೆನಪಿನಲ್ಲಿ ಹುತಾತ್ಮರ ದಿನಾಚರಣೆಗೆ ಇಡೀ ಊರು ಹುರುಪಿನಲ್ಲಿತ್ತು.

ಮಹದಾಯಿ ನೀರಿಗಾಗಿ ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ಹೋರಾಟ, ರಾಜ್ಯದ ರೈತರನ್ನು ಕಂಗೆಡಿಸಿರುವ ಭೂಸುಧಾರಣೆ ಕಾಯ್ದೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಣ ಕಹಳೆ ಮೊಳಗಿಸುವ ಉತ್ಸಾಹವೂ ಸೇರಿತ್ತು. ಈ ದಿನವನ್ನು ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಸಂಕಲ್ಪ ದಿನವನ್ನಾಗಿ ಆಚರಿಸಲು ನಾಡಿನ ಎಲ್ಲ ಭಾಗದಿಂದ ರೈತರು ಆಗಮಿಸಿದ್ದರು.

ಗದಗ ಜಿಲ್ಲೆಯ ರೋಣ ಪಟ್ಟಣದಿಂದ ನರಗುಂದಕ್ಕೆ ಆಗಮಿಸಿದ ನೂರಾರು ರೈತರ ಪಾದಯಾತ್ರೆ ಮೂಲಕ ಗಮಿಸಿದ್ದು, ಪಾದಯಾತ್ರೆಯಲ್ಲಿ ಹಲವು ರಾಜ್ಯಗಳ ರೈತ ಮುಖಂಡರು ಭಾಗಿಯಾಗಿದ್ದಾರೆ. ನರಗುಂದ ಹುತಾತ್ಮರ ಸ್ಮಾರಕಕ್ಕೆ ಮಾಲಾಪರ್ಣೆ ಮಾಡಿದ ಬಳಿಕ ವೇದಿಕೆಗೆ ಆಗಮಿಸಿದರು.

ಕುವೆಂಪು ವಿರಚಿತ ಉಳುವ ಯೋಗಿಯ ನೋಡಲ್ಲಿ ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೆಹಲಿಯ ಗಡಿಗಳಲ್ಲಿ ಎಂಟು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿರುವ ಮುಖಂಡರುಗಳಾದ ಭಾರತೀಯ ಕಿಸಾನ್‌ ಯೂನಿಯನ್‌ನ ಹರ್ನೇಕ್‌ ಸಿಂಗ್, ಜೈ ಕಿಸಾನ್‌ ಸಂಘಟನೆಯ ದೀಪಕ್‌ ಲಾಂಬ ಅವರು ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಚಿತ್ರ: ರಾಜಶೇಖರ್‌ ಅಕ್ಕಿ

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ದೀಪಕ್‌ ಲಾಂಬ ಅವರು, ‘ಒಕ್ಕೂಟ ಸರ್ಕಾರದ ಕೃಷಿ ಮಂತ್ರಿಗೆ ಅವರೇ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಯಾವುವು ಎಂಬುದು ಗೊತ್ತಿಲ್ಲ. ಆದರೂ ಸರ್ಕಾರ ಒಂದು ಹೆಸರಿಟ್ಟಿದೆ. ನಾವು ಅದಕ್ಕೊಂದು ಹೆಸರಿಟ್ಟಿದ್ದೇವೆ. ಅಗತ್ಯವಸ್ತುಗಳ ಕಾಯ್ದೆ ಎಂದು ಅವರು ಕರೆದಿದ್ದಾರೆ, ನಾವು ಕಾನೂನು ಮುಕ್ತಗೊಳಿಸುವ ಕಾಯ್ದೆ, ಎರಡನೆಯದು, ಎಪಿಎಂಸಿ ಕೊನೆಗೊಳಿಸುವ ಮಾತಾಡುವ ಕಾಯ್ದೆ, ಅದನ್ನು ನಾವು ಮಾರುಕಟ್ಟೆ ಕೊಲೆ ಮಾಡುವ ಕಾಯ್ದೆ, ಮೂರನೆಯದು, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ ಬಗ್ಗೆ ಹೇಳುತ್ತದೆ, ಅದನ್ನು ಕೃಷಿ ಬಂದ್‌ ಮಾಡಿದ ಕಾನೂನು ಎಂದು ಕರೆದಿದ್ದೇವೆ. ಇವೇ ಕೃಷಿ ಕಾಯ್ದೆಗಳ ಉದ್ದೇಶವನ್ನು ತಿಳಿಸುತ್ತವೆ ಭಾವಿಸುತ್ತೇನೆ’ ಎಂದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿಶ್ಲೇಷಿಸಿದರು.

ಕಪ್ಪು, ತೆರಿಗೆ ವಿನಾಯಿತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದ ಈ ಸರ್ಕಾರ, ರೈತರ ವಿಷಯದಲ್ಲೂ ಭರವಸೆಯ ನೀಡಿತ್ತು. ಈಗ ಅದನ್ನು ಮರೆತು ಅಹಂಕಾರದಿಂದ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮಾಧ್ಯಮದವರು ಈ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂದು ನಮಗೆ ಕೇಳುತ್ತಾರೆ. ಮೋದಿ ಎಷ್ಟು ತಡ ಮಾಡುತ್ತಾರೆ ಅಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.

“ಸರ್ಕಾರವನ್ನು ಪ್ರಶ್ನಿಸುವುದು ದೇಶದ ಪ್ರತಿ ನಾಗರಿಕನ ಹಕ್ಕು. ಸಂಯುಕ್ತ ಕಿಸಾನ್‌ ಮೋರ್ಚಾ ಇದನ್ನೇ ಮಾಡುತ್ತಾ ಬಂದಿದೆ. ಇಷ್ಟು ದಿನ ಬಿಜೆಪಿಯ ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಾ ಬಂದಿದ್ದೇವೆ. ಈಗ ಇದರ ಮುಂದಿನ ಹಂತ ಆದೇಶ ಕೊಡುವುದು. ಈ ಹಿನ್ನೆಲೆಯಲ್ಲಿ ಕಳೆದ 17ನೇ ತಾರೀಖು ಜನರ ವಿಪ್‌ ಜಾರಿ ಮಾಡಿದ್ದೇವೆ” ಎಂದು ದೀಪಕ್‌ ಲಾಂಬ ಹೋರಾಟದ ಸ್ವರೂಪವನ್ನು ವಿವರಿಸಿದರು.

ದೆಹಲಿಯಲ್ಲಿ ಚಳಿಗಾಲದ ಅಧಿವೇಶನದ ಉದ್ದಕ್ಕೂ ಸಂಸತ್‌ ಎದುರು ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ಅಧಿವೇಶನ ಸಂಸತ್ತಿನ ಒಳಗೆ, ರೈತರ ಸಂಸತ್ತು ಸಂಸತ್‌ ಭವನದ ಹೊರಗೆ ನಡೆಯಲಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಡೋಣ, ಗೆಲ್ಲೋಣ ಇದೇ ನಮ್ಮ ಘೋಷವಾಕ್ಯ ಎಂದು ಹೇಳಿದರು.

ಐವತ್ತಾರು ಇಂಚಿನ ಎದೆಯ ಮೋದಿಯವರಲ್ಲಿ ಭಯ ಕಾಣುತ್ತೇವೆ. ನಾವು ಹುತಾತ್ಮರ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ. ನಮ್ಮನ್ನು ನಾವು ಎಲ್ಲಿ ಹೋಗುತ್ತಿದ್ದೇವೆ, ಏನು ತಿಂದೆವು, ಏನು ಮಾಡುತ್ತಿದ್ದೇವೆ ಎಂದು ಹಿಂಬಾಲಿಸುತ್ತಿದ್ದಾರೆ. ಸಂತ ಹೆದರುವುದಿಲ್ಲ. ಕಳ್ಳನಿಗೆ ಭಯವಿರುತ್ತದೆ. ದೆಹಲಿಯಲ್ಲಿ ಅಷ್ಟೇ, ಕರ್ನಾಟಕಕ್ಕೂ ಬಂದು ಮೋದಿಯವರಲ್ಲಿ ಭಯವಿರುವುದು ನಮಗೆ ಗೊತ್ತಾಗುತ್ತಿದೆ’ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ಹರ್ನೇಕ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ಚಿತ್ರ: ರಾಜಶೇಖರ್‌ ಅಕ್ಕಿ

ನಾವು ಒಂದು ಕಿಚ್ಚನ್ನು ಇಲ್ಲಿಗೆ ತಂದಿದ್ದೇವೆ. ನೀವು ಸ್ವರ್ಗದಷ್ಟು ಸಮೃದ್ಧವಾದ ಸ್ಥಳ. ಆದರೆ ಸ್ವರ್ಗವಾಗಿಲ್ಲ. ದೆಹಲಿಯ ಗಡಿಗಳಲ್ಲಿ ಉರಿಸುತ್ತಿರುವ ಈ ಕಿಚ್ಚನ್ನು ಇಲ್ಲಿಯೂ ನಿಮ್ಮ ಎದೆಗೆ ತಾಕಬೇಕೆಂದು ಬಯಸುತ್ತಿದ್ದೇವೆ. ಮೋದಿ ಮತ್ತು ಯೋಗಿಯಂತಹವರನ್ನು ಕುಕೃತ್ಯಗಳನ್ನು ಸುಡಲು ಈ ಕಿಚ್ಚು ಬೇಕು. ಅದನ್ನು ಕರ್ನಾಟಕಕ್ಕೆ ತಂದಿದ್ದೇವೆ. ಇಲ್ಲೂ ಜೀವಂತವಾಗಿ ಪ್ರಜ್ವಲಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಬೆಂಕಿಯಿಂದ ಐವತ್ತಾರು ಎದೆಯೂ ನಡುಗಿ ಹೋಗಿದೆ ಎಂದು ಹರ್ನೇಕ್‌ ಸಿಂಗ್‌ ಹೇಳಿದರು.

ಕಾರ್ಯಕ್ರಮಕದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾದ ಚಾಮರಸ ಪಾಟೀಲ್‌, ಮಾಜಿ ಶಾಸಕ ಬಿ ಆರ್‌ ಪಾಟೀಲ್‌, ರೈತ ಮುಖಂಡರುಗಳಾದ, ಮಧುಸೂದನ್‌ ತಿವಾರಿ, ರೈತ ಮಹಿಳಾ ಮುಖಂಡರಾದ ಲಲಿತಾ ಮತ್ತು ಮಂಜುಳಾ, ಸಾಮಾಜಿಕ ಕಾರ್ಯಕರ್ತ ಎಸ್ ಆರ್ ಹಿರೇಮಠ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಹೋರಾಟ ಕರ್ನಾಟಕ, ಭಾರತೀಯ ಕೃಷಿಕ್‌ ಸಮಾಜ, ಮಹದಾಯಿ ನೀರಿಗಾಗಿ ಮಹಾವೇದಿಕೆ, ಕರ್ನಾಟಕ ರೈತ ಸೇನೆ, ಜನಾಂದೋಲನ ಮಹಾಮೈತ್ರಿ, ಉತ್ತರ ಕರ್ನಾಟಕ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೃಪೆ: ಅನ್ನದ ಋಣ


ಇದನ್ನೂ ಓದಿ:  ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...