Homeಚಳವಳಿಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

- Advertisement -
- Advertisement -

ದಟ್ಟ ಕವಿದ ಮೋಡ, ಮಳೆಗಾಳಿ. ಬದಲಾವಣೆಗೆ ಮುನ್ಸೂಚನೆ ನೀಡುವಂತಹ ವಾತಾವರಣ. ಹೋರಾಟದ ಕಿಚ್ಚನ್ನು ಹೊತ್ತು ತಂದ ಹೋರಾಟಗಾರರು… ಇಂತಹ ಪರಿಸರದಲ್ಲಿ ಹಾರಾಡಿದ್ದು ಹಸಿರುಶಾಲು, ಕೇಳಿಸಿದ್ದು ಉಳುವ ಯೋಗಿ ನೋಡಲ್ಲಿ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆ..

ಬಂಡಾಯದ ನೆಲ ನರಗುಂದದಲ್ಲಿ ಬುಧವಾರ ಬೆಳಗಿನಿಂದಲೇ ಹಸಿರು ಶಾಲುಗಳ ಸಂಚಲನ. 41 ವರ್ಷಗಳ ಹಿಂದೆ ತಮ್ಮ ಹಕ್ಕುಗಳಿಗೆ, ಸರ್ಕಾರದ ದಬ್ಬಾಳಿಕೆಯ ವಿರುದ್ಧ ಸಿಡಿದು ಜೀವ ತ್ಯಾಗ ಮಾಡಿದ ರೈತರ ನೆನಪಿನಲ್ಲಿ ಹುತಾತ್ಮರ ದಿನಾಚರಣೆಗೆ ಇಡೀ ಊರು ಹುರುಪಿನಲ್ಲಿತ್ತು.

ಮಹದಾಯಿ ನೀರಿಗಾಗಿ ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ಹೋರಾಟ, ರಾಜ್ಯದ ರೈತರನ್ನು ಕಂಗೆಡಿಸಿರುವ ಭೂಸುಧಾರಣೆ ಕಾಯ್ದೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಣ ಕಹಳೆ ಮೊಳಗಿಸುವ ಉತ್ಸಾಹವೂ ಸೇರಿತ್ತು. ಈ ದಿನವನ್ನು ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಸಂಕಲ್ಪ ದಿನವನ್ನಾಗಿ ಆಚರಿಸಲು ನಾಡಿನ ಎಲ್ಲ ಭಾಗದಿಂದ ರೈತರು ಆಗಮಿಸಿದ್ದರು.

ಗದಗ ಜಿಲ್ಲೆಯ ರೋಣ ಪಟ್ಟಣದಿಂದ ನರಗುಂದಕ್ಕೆ ಆಗಮಿಸಿದ ನೂರಾರು ರೈತರ ಪಾದಯಾತ್ರೆ ಮೂಲಕ ಗಮಿಸಿದ್ದು, ಪಾದಯಾತ್ರೆಯಲ್ಲಿ ಹಲವು ರಾಜ್ಯಗಳ ರೈತ ಮುಖಂಡರು ಭಾಗಿಯಾಗಿದ್ದಾರೆ. ನರಗುಂದ ಹುತಾತ್ಮರ ಸ್ಮಾರಕಕ್ಕೆ ಮಾಲಾಪರ್ಣೆ ಮಾಡಿದ ಬಳಿಕ ವೇದಿಕೆಗೆ ಆಗಮಿಸಿದರು.

ಕುವೆಂಪು ವಿರಚಿತ ಉಳುವ ಯೋಗಿಯ ನೋಡಲ್ಲಿ ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೆಹಲಿಯ ಗಡಿಗಳಲ್ಲಿ ಎಂಟು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿರುವ ಮುಖಂಡರುಗಳಾದ ಭಾರತೀಯ ಕಿಸಾನ್‌ ಯೂನಿಯನ್‌ನ ಹರ್ನೇಕ್‌ ಸಿಂಗ್, ಜೈ ಕಿಸಾನ್‌ ಸಂಘಟನೆಯ ದೀಪಕ್‌ ಲಾಂಬ ಅವರು ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಚಿತ್ರ: ರಾಜಶೇಖರ್‌ ಅಕ್ಕಿ

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ದೀಪಕ್‌ ಲಾಂಬ ಅವರು, ‘ಒಕ್ಕೂಟ ಸರ್ಕಾರದ ಕೃಷಿ ಮಂತ್ರಿಗೆ ಅವರೇ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಯಾವುವು ಎಂಬುದು ಗೊತ್ತಿಲ್ಲ. ಆದರೂ ಸರ್ಕಾರ ಒಂದು ಹೆಸರಿಟ್ಟಿದೆ. ನಾವು ಅದಕ್ಕೊಂದು ಹೆಸರಿಟ್ಟಿದ್ದೇವೆ. ಅಗತ್ಯವಸ್ತುಗಳ ಕಾಯ್ದೆ ಎಂದು ಅವರು ಕರೆದಿದ್ದಾರೆ, ನಾವು ಕಾನೂನು ಮುಕ್ತಗೊಳಿಸುವ ಕಾಯ್ದೆ, ಎರಡನೆಯದು, ಎಪಿಎಂಸಿ ಕೊನೆಗೊಳಿಸುವ ಮಾತಾಡುವ ಕಾಯ್ದೆ, ಅದನ್ನು ನಾವು ಮಾರುಕಟ್ಟೆ ಕೊಲೆ ಮಾಡುವ ಕಾಯ್ದೆ, ಮೂರನೆಯದು, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ ಬಗ್ಗೆ ಹೇಳುತ್ತದೆ, ಅದನ್ನು ಕೃಷಿ ಬಂದ್‌ ಮಾಡಿದ ಕಾನೂನು ಎಂದು ಕರೆದಿದ್ದೇವೆ. ಇವೇ ಕೃಷಿ ಕಾಯ್ದೆಗಳ ಉದ್ದೇಶವನ್ನು ತಿಳಿಸುತ್ತವೆ ಭಾವಿಸುತ್ತೇನೆ’ ಎಂದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿಶ್ಲೇಷಿಸಿದರು.

ಕಪ್ಪು, ತೆರಿಗೆ ವಿನಾಯಿತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದ ಈ ಸರ್ಕಾರ, ರೈತರ ವಿಷಯದಲ್ಲೂ ಭರವಸೆಯ ನೀಡಿತ್ತು. ಈಗ ಅದನ್ನು ಮರೆತು ಅಹಂಕಾರದಿಂದ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮಾಧ್ಯಮದವರು ಈ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂದು ನಮಗೆ ಕೇಳುತ್ತಾರೆ. ಮೋದಿ ಎಷ್ಟು ತಡ ಮಾಡುತ್ತಾರೆ ಅಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.

“ಸರ್ಕಾರವನ್ನು ಪ್ರಶ್ನಿಸುವುದು ದೇಶದ ಪ್ರತಿ ನಾಗರಿಕನ ಹಕ್ಕು. ಸಂಯುಕ್ತ ಕಿಸಾನ್‌ ಮೋರ್ಚಾ ಇದನ್ನೇ ಮಾಡುತ್ತಾ ಬಂದಿದೆ. ಇಷ್ಟು ದಿನ ಬಿಜೆಪಿಯ ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಾ ಬಂದಿದ್ದೇವೆ. ಈಗ ಇದರ ಮುಂದಿನ ಹಂತ ಆದೇಶ ಕೊಡುವುದು. ಈ ಹಿನ್ನೆಲೆಯಲ್ಲಿ ಕಳೆದ 17ನೇ ತಾರೀಖು ಜನರ ವಿಪ್‌ ಜಾರಿ ಮಾಡಿದ್ದೇವೆ” ಎಂದು ದೀಪಕ್‌ ಲಾಂಬ ಹೋರಾಟದ ಸ್ವರೂಪವನ್ನು ವಿವರಿಸಿದರು.

ದೆಹಲಿಯಲ್ಲಿ ಚಳಿಗಾಲದ ಅಧಿವೇಶನದ ಉದ್ದಕ್ಕೂ ಸಂಸತ್‌ ಎದುರು ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ಅಧಿವೇಶನ ಸಂಸತ್ತಿನ ಒಳಗೆ, ರೈತರ ಸಂಸತ್ತು ಸಂಸತ್‌ ಭವನದ ಹೊರಗೆ ನಡೆಯಲಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಡೋಣ, ಗೆಲ್ಲೋಣ ಇದೇ ನಮ್ಮ ಘೋಷವಾಕ್ಯ ಎಂದು ಹೇಳಿದರು.

ಐವತ್ತಾರು ಇಂಚಿನ ಎದೆಯ ಮೋದಿಯವರಲ್ಲಿ ಭಯ ಕಾಣುತ್ತೇವೆ. ನಾವು ಹುತಾತ್ಮರ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ. ನಮ್ಮನ್ನು ನಾವು ಎಲ್ಲಿ ಹೋಗುತ್ತಿದ್ದೇವೆ, ಏನು ತಿಂದೆವು, ಏನು ಮಾಡುತ್ತಿದ್ದೇವೆ ಎಂದು ಹಿಂಬಾಲಿಸುತ್ತಿದ್ದಾರೆ. ಸಂತ ಹೆದರುವುದಿಲ್ಲ. ಕಳ್ಳನಿಗೆ ಭಯವಿರುತ್ತದೆ. ದೆಹಲಿಯಲ್ಲಿ ಅಷ್ಟೇ, ಕರ್ನಾಟಕಕ್ಕೂ ಬಂದು ಮೋದಿಯವರಲ್ಲಿ ಭಯವಿರುವುದು ನಮಗೆ ಗೊತ್ತಾಗುತ್ತಿದೆ’ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ಹರ್ನೇಕ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ಚಿತ್ರ: ರಾಜಶೇಖರ್‌ ಅಕ್ಕಿ

ನಾವು ಒಂದು ಕಿಚ್ಚನ್ನು ಇಲ್ಲಿಗೆ ತಂದಿದ್ದೇವೆ. ನೀವು ಸ್ವರ್ಗದಷ್ಟು ಸಮೃದ್ಧವಾದ ಸ್ಥಳ. ಆದರೆ ಸ್ವರ್ಗವಾಗಿಲ್ಲ. ದೆಹಲಿಯ ಗಡಿಗಳಲ್ಲಿ ಉರಿಸುತ್ತಿರುವ ಈ ಕಿಚ್ಚನ್ನು ಇಲ್ಲಿಯೂ ನಿಮ್ಮ ಎದೆಗೆ ತಾಕಬೇಕೆಂದು ಬಯಸುತ್ತಿದ್ದೇವೆ. ಮೋದಿ ಮತ್ತು ಯೋಗಿಯಂತಹವರನ್ನು ಕುಕೃತ್ಯಗಳನ್ನು ಸುಡಲು ಈ ಕಿಚ್ಚು ಬೇಕು. ಅದನ್ನು ಕರ್ನಾಟಕಕ್ಕೆ ತಂದಿದ್ದೇವೆ. ಇಲ್ಲೂ ಜೀವಂತವಾಗಿ ಪ್ರಜ್ವಲಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಬೆಂಕಿಯಿಂದ ಐವತ್ತಾರು ಎದೆಯೂ ನಡುಗಿ ಹೋಗಿದೆ ಎಂದು ಹರ್ನೇಕ್‌ ಸಿಂಗ್‌ ಹೇಳಿದರು.

ಕಾರ್ಯಕ್ರಮಕದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾದ ಚಾಮರಸ ಪಾಟೀಲ್‌, ಮಾಜಿ ಶಾಸಕ ಬಿ ಆರ್‌ ಪಾಟೀಲ್‌, ರೈತ ಮುಖಂಡರುಗಳಾದ, ಮಧುಸೂದನ್‌ ತಿವಾರಿ, ರೈತ ಮಹಿಳಾ ಮುಖಂಡರಾದ ಲಲಿತಾ ಮತ್ತು ಮಂಜುಳಾ, ಸಾಮಾಜಿಕ ಕಾರ್ಯಕರ್ತ ಎಸ್ ಆರ್ ಹಿರೇಮಠ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಹೋರಾಟ ಕರ್ನಾಟಕ, ಭಾರತೀಯ ಕೃಷಿಕ್‌ ಸಮಾಜ, ಮಹದಾಯಿ ನೀರಿಗಾಗಿ ಮಹಾವೇದಿಕೆ, ಕರ್ನಾಟಕ ರೈತ ಸೇನೆ, ಜನಾಂದೋಲನ ಮಹಾಮೈತ್ರಿ, ಉತ್ತರ ಕರ್ನಾಟಕ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೃಪೆ: ಅನ್ನದ ಋಣ


ಇದನ್ನೂ ಓದಿ:  ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...