Homeಚಳವಳಿಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

- Advertisement -
- Advertisement -

ದಟ್ಟ ಕವಿದ ಮೋಡ, ಮಳೆಗಾಳಿ. ಬದಲಾವಣೆಗೆ ಮುನ್ಸೂಚನೆ ನೀಡುವಂತಹ ವಾತಾವರಣ. ಹೋರಾಟದ ಕಿಚ್ಚನ್ನು ಹೊತ್ತು ತಂದ ಹೋರಾಟಗಾರರು… ಇಂತಹ ಪರಿಸರದಲ್ಲಿ ಹಾರಾಡಿದ್ದು ಹಸಿರುಶಾಲು, ಕೇಳಿಸಿದ್ದು ಉಳುವ ಯೋಗಿ ನೋಡಲ್ಲಿ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆ..

ಬಂಡಾಯದ ನೆಲ ನರಗುಂದದಲ್ಲಿ ಬುಧವಾರ ಬೆಳಗಿನಿಂದಲೇ ಹಸಿರು ಶಾಲುಗಳ ಸಂಚಲನ. 41 ವರ್ಷಗಳ ಹಿಂದೆ ತಮ್ಮ ಹಕ್ಕುಗಳಿಗೆ, ಸರ್ಕಾರದ ದಬ್ಬಾಳಿಕೆಯ ವಿರುದ್ಧ ಸಿಡಿದು ಜೀವ ತ್ಯಾಗ ಮಾಡಿದ ರೈತರ ನೆನಪಿನಲ್ಲಿ ಹುತಾತ್ಮರ ದಿನಾಚರಣೆಗೆ ಇಡೀ ಊರು ಹುರುಪಿನಲ್ಲಿತ್ತು.

ಮಹದಾಯಿ ನೀರಿಗಾಗಿ ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ಹೋರಾಟ, ರಾಜ್ಯದ ರೈತರನ್ನು ಕಂಗೆಡಿಸಿರುವ ಭೂಸುಧಾರಣೆ ಕಾಯ್ದೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಣ ಕಹಳೆ ಮೊಳಗಿಸುವ ಉತ್ಸಾಹವೂ ಸೇರಿತ್ತು. ಈ ದಿನವನ್ನು ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಸಂಕಲ್ಪ ದಿನವನ್ನಾಗಿ ಆಚರಿಸಲು ನಾಡಿನ ಎಲ್ಲ ಭಾಗದಿಂದ ರೈತರು ಆಗಮಿಸಿದ್ದರು.

ಗದಗ ಜಿಲ್ಲೆಯ ರೋಣ ಪಟ್ಟಣದಿಂದ ನರಗುಂದಕ್ಕೆ ಆಗಮಿಸಿದ ನೂರಾರು ರೈತರ ಪಾದಯಾತ್ರೆ ಮೂಲಕ ಗಮಿಸಿದ್ದು, ಪಾದಯಾತ್ರೆಯಲ್ಲಿ ಹಲವು ರಾಜ್ಯಗಳ ರೈತ ಮುಖಂಡರು ಭಾಗಿಯಾಗಿದ್ದಾರೆ. ನರಗುಂದ ಹುತಾತ್ಮರ ಸ್ಮಾರಕಕ್ಕೆ ಮಾಲಾಪರ್ಣೆ ಮಾಡಿದ ಬಳಿಕ ವೇದಿಕೆಗೆ ಆಗಮಿಸಿದರು.

ಕುವೆಂಪು ವಿರಚಿತ ಉಳುವ ಯೋಗಿಯ ನೋಡಲ್ಲಿ ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೆಹಲಿಯ ಗಡಿಗಳಲ್ಲಿ ಎಂಟು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿರುವ ಮುಖಂಡರುಗಳಾದ ಭಾರತೀಯ ಕಿಸಾನ್‌ ಯೂನಿಯನ್‌ನ ಹರ್ನೇಕ್‌ ಸಿಂಗ್, ಜೈ ಕಿಸಾನ್‌ ಸಂಘಟನೆಯ ದೀಪಕ್‌ ಲಾಂಬ ಅವರು ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಚಿತ್ರ: ರಾಜಶೇಖರ್‌ ಅಕ್ಕಿ

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ದೀಪಕ್‌ ಲಾಂಬ ಅವರು, ‘ಒಕ್ಕೂಟ ಸರ್ಕಾರದ ಕೃಷಿ ಮಂತ್ರಿಗೆ ಅವರೇ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಯಾವುವು ಎಂಬುದು ಗೊತ್ತಿಲ್ಲ. ಆದರೂ ಸರ್ಕಾರ ಒಂದು ಹೆಸರಿಟ್ಟಿದೆ. ನಾವು ಅದಕ್ಕೊಂದು ಹೆಸರಿಟ್ಟಿದ್ದೇವೆ. ಅಗತ್ಯವಸ್ತುಗಳ ಕಾಯ್ದೆ ಎಂದು ಅವರು ಕರೆದಿದ್ದಾರೆ, ನಾವು ಕಾನೂನು ಮುಕ್ತಗೊಳಿಸುವ ಕಾಯ್ದೆ, ಎರಡನೆಯದು, ಎಪಿಎಂಸಿ ಕೊನೆಗೊಳಿಸುವ ಮಾತಾಡುವ ಕಾಯ್ದೆ, ಅದನ್ನು ನಾವು ಮಾರುಕಟ್ಟೆ ಕೊಲೆ ಮಾಡುವ ಕಾಯ್ದೆ, ಮೂರನೆಯದು, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ ಬಗ್ಗೆ ಹೇಳುತ್ತದೆ, ಅದನ್ನು ಕೃಷಿ ಬಂದ್‌ ಮಾಡಿದ ಕಾನೂನು ಎಂದು ಕರೆದಿದ್ದೇವೆ. ಇವೇ ಕೃಷಿ ಕಾಯ್ದೆಗಳ ಉದ್ದೇಶವನ್ನು ತಿಳಿಸುತ್ತವೆ ಭಾವಿಸುತ್ತೇನೆ’ ಎಂದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿಶ್ಲೇಷಿಸಿದರು.

ಕಪ್ಪು, ತೆರಿಗೆ ವಿನಾಯಿತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದ ಈ ಸರ್ಕಾರ, ರೈತರ ವಿಷಯದಲ್ಲೂ ಭರವಸೆಯ ನೀಡಿತ್ತು. ಈಗ ಅದನ್ನು ಮರೆತು ಅಹಂಕಾರದಿಂದ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮಾಧ್ಯಮದವರು ಈ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂದು ನಮಗೆ ಕೇಳುತ್ತಾರೆ. ಮೋದಿ ಎಷ್ಟು ತಡ ಮಾಡುತ್ತಾರೆ ಅಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.

“ಸರ್ಕಾರವನ್ನು ಪ್ರಶ್ನಿಸುವುದು ದೇಶದ ಪ್ರತಿ ನಾಗರಿಕನ ಹಕ್ಕು. ಸಂಯುಕ್ತ ಕಿಸಾನ್‌ ಮೋರ್ಚಾ ಇದನ್ನೇ ಮಾಡುತ್ತಾ ಬಂದಿದೆ. ಇಷ್ಟು ದಿನ ಬಿಜೆಪಿಯ ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಾ ಬಂದಿದ್ದೇವೆ. ಈಗ ಇದರ ಮುಂದಿನ ಹಂತ ಆದೇಶ ಕೊಡುವುದು. ಈ ಹಿನ್ನೆಲೆಯಲ್ಲಿ ಕಳೆದ 17ನೇ ತಾರೀಖು ಜನರ ವಿಪ್‌ ಜಾರಿ ಮಾಡಿದ್ದೇವೆ” ಎಂದು ದೀಪಕ್‌ ಲಾಂಬ ಹೋರಾಟದ ಸ್ವರೂಪವನ್ನು ವಿವರಿಸಿದರು.

ದೆಹಲಿಯಲ್ಲಿ ಚಳಿಗಾಲದ ಅಧಿವೇಶನದ ಉದ್ದಕ್ಕೂ ಸಂಸತ್‌ ಎದುರು ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ಅಧಿವೇಶನ ಸಂಸತ್ತಿನ ಒಳಗೆ, ರೈತರ ಸಂಸತ್ತು ಸಂಸತ್‌ ಭವನದ ಹೊರಗೆ ನಡೆಯಲಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಡೋಣ, ಗೆಲ್ಲೋಣ ಇದೇ ನಮ್ಮ ಘೋಷವಾಕ್ಯ ಎಂದು ಹೇಳಿದರು.

ಐವತ್ತಾರು ಇಂಚಿನ ಎದೆಯ ಮೋದಿಯವರಲ್ಲಿ ಭಯ ಕಾಣುತ್ತೇವೆ. ನಾವು ಹುತಾತ್ಮರ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ. ನಮ್ಮನ್ನು ನಾವು ಎಲ್ಲಿ ಹೋಗುತ್ತಿದ್ದೇವೆ, ಏನು ತಿಂದೆವು, ಏನು ಮಾಡುತ್ತಿದ್ದೇವೆ ಎಂದು ಹಿಂಬಾಲಿಸುತ್ತಿದ್ದಾರೆ. ಸಂತ ಹೆದರುವುದಿಲ್ಲ. ಕಳ್ಳನಿಗೆ ಭಯವಿರುತ್ತದೆ. ದೆಹಲಿಯಲ್ಲಿ ಅಷ್ಟೇ, ಕರ್ನಾಟಕಕ್ಕೂ ಬಂದು ಮೋದಿಯವರಲ್ಲಿ ಭಯವಿರುವುದು ನಮಗೆ ಗೊತ್ತಾಗುತ್ತಿದೆ’ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ಹರ್ನೇಕ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ಚಿತ್ರ: ರಾಜಶೇಖರ್‌ ಅಕ್ಕಿ

ನಾವು ಒಂದು ಕಿಚ್ಚನ್ನು ಇಲ್ಲಿಗೆ ತಂದಿದ್ದೇವೆ. ನೀವು ಸ್ವರ್ಗದಷ್ಟು ಸಮೃದ್ಧವಾದ ಸ್ಥಳ. ಆದರೆ ಸ್ವರ್ಗವಾಗಿಲ್ಲ. ದೆಹಲಿಯ ಗಡಿಗಳಲ್ಲಿ ಉರಿಸುತ್ತಿರುವ ಈ ಕಿಚ್ಚನ್ನು ಇಲ್ಲಿಯೂ ನಿಮ್ಮ ಎದೆಗೆ ತಾಕಬೇಕೆಂದು ಬಯಸುತ್ತಿದ್ದೇವೆ. ಮೋದಿ ಮತ್ತು ಯೋಗಿಯಂತಹವರನ್ನು ಕುಕೃತ್ಯಗಳನ್ನು ಸುಡಲು ಈ ಕಿಚ್ಚು ಬೇಕು. ಅದನ್ನು ಕರ್ನಾಟಕಕ್ಕೆ ತಂದಿದ್ದೇವೆ. ಇಲ್ಲೂ ಜೀವಂತವಾಗಿ ಪ್ರಜ್ವಲಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಬೆಂಕಿಯಿಂದ ಐವತ್ತಾರು ಎದೆಯೂ ನಡುಗಿ ಹೋಗಿದೆ ಎಂದು ಹರ್ನೇಕ್‌ ಸಿಂಗ್‌ ಹೇಳಿದರು.

ಕಾರ್ಯಕ್ರಮಕದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾದ ಚಾಮರಸ ಪಾಟೀಲ್‌, ಮಾಜಿ ಶಾಸಕ ಬಿ ಆರ್‌ ಪಾಟೀಲ್‌, ರೈತ ಮುಖಂಡರುಗಳಾದ, ಮಧುಸೂದನ್‌ ತಿವಾರಿ, ರೈತ ಮಹಿಳಾ ಮುಖಂಡರಾದ ಲಲಿತಾ ಮತ್ತು ಮಂಜುಳಾ, ಸಾಮಾಜಿಕ ಕಾರ್ಯಕರ್ತ ಎಸ್ ಆರ್ ಹಿರೇಮಠ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಹೋರಾಟ ಕರ್ನಾಟಕ, ಭಾರತೀಯ ಕೃಷಿಕ್‌ ಸಮಾಜ, ಮಹದಾಯಿ ನೀರಿಗಾಗಿ ಮಹಾವೇದಿಕೆ, ಕರ್ನಾಟಕ ರೈತ ಸೇನೆ, ಜನಾಂದೋಲನ ಮಹಾಮೈತ್ರಿ, ಉತ್ತರ ಕರ್ನಾಟಕ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೃಪೆ: ಅನ್ನದ ಋಣ


ಇದನ್ನೂ ಓದಿ:  ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....