Homeಮುಖಪುಟಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

- Advertisement -
- Advertisement -

ಕಾಂಗ್ರೆಸ್ ವಿರುದ್ದ ಪ್ರತಿಭಟಿಸುವ ಮೂಲಕ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಿನ್ನೆಯಿಂದ (ಮೇ 1) ಭಾರೀ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್‌ ವಿರುದ್ದ ಹಲವು ಆರೋಪಗಳನ್ನು ಹೊರಿಸಿ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance tax), ನಗರ ನಕ್ಸಲರು (Urban Naxalism) ಇತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಆಜ್‌ತಕ್ ಸುದ್ದಿ ವಾಹಿನಿಯ ವರದಿಗಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ.

ವರದಿಗಾರ “ನೀವು ಏಕೆ, ಪ್ರತಿಭಟಿಸುತ್ತಿದ್ದೀರಿ?” ಎಂದು ಕೇಳಿದ್ದಕ್ಕೆ, ಕೆಲ ವಿದ್ಯಾರ್ಥಿಗಳು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ತರಲಿದೆ” ಎಂದಿದ್ದಾರೆ. “ಪಿತ್ರಾರ್ಜಿತ ಆಸ್ತಿ ತೆರಿಗೆ ಎಂದರೇನು?” ಎಂದು ವರದಿಗಾರ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಉತ್ತರಿಸಲು ತಡವರಿಸಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ತಾವು ಹಿಡಿದಿದ್ದ ಭಿತ್ತಿ ಪತ್ರವನ್ನು ಸರಿಯಾಗಿ ಓದಲು ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿದ್ಯಾರ್ಥಿಗಳಿಗೆ ತಾವು ಏಕೆ ಪ್ರತಿಭಟಿಸುತ್ತೀದ್ದೇವೆ ಎಂದೇ ಗೊತ್ತಿರಲಿಲ್ಲ.

ಆಜ್‌ತಕ್‌ ವರದಿ ಪ್ರಸಾರಗೊಂಡ ತಕ್ಷಣ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಜನರು ವಿಡಿಯೋ ಹಂಚಿಕೊಂಡು, “ಈ ವಿದ್ಯಾರ್ಥಿಗಳು ಮೋದಿಯ ವಾಟ್ಸಾಪ್ ಯೂನಿವರ್ಸಿಟಿಯವರು” ಎಂದು ಟ್ರೋಲ್ ಮಾಡಿದ್ದಾರೆ. ಎಕ್ಸ್‌ನಲ್ಲಿ ‘ಗಾಲ್ಗೋಟಿಯಾಸ್ ಯೂನಿವರ್ಸಿಟಿ’ ಟ್ರೆಡಿಂಗ್ ಆಗಿದೆ.

ಕ್ಷಮಿಸುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು :

ತಮ್ಮ ವಿಡಿಯೋ ದೇಶದಾದ್ಯಂತ ವೈರಲ್ ಆಗುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಕೇಳಿದ್ದು, ಪ್ರತಿಭಟನೆಯ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಲಕ್ಷೀ ಶರ್ಮಾ ಎಂಬ ವಿದ್ಯಾರ್ಥಿನಿ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿ ” ನಮ್ಮ ತಪ್ಪುಗಳು ನಮಗೆ ಅರಿವಾಗಿದೆ. ನಮಗೆ ಅದು ಪ್ರೊಪಗೊಂಡ ಕಾರ್ಯಕ್ರಮ ಎಂದು ಗೊತ್ತಿರಲಿಲ್ಲ. ಕಂಗನಾ ರಣಾವತ್ ಅವರನ್ನು ಭೇಟಿಯಾಗುವ ಅವಕಾಶ ಸಿಗಲಿದೆ ಎಂದು ನಮಗೆ ಹೇಳಲಾಗಿತ್ತು. ವಿದ್ಯಾರ್ಥಿ ಪರಿಷತ್ತಿನ ಪರವಾಗಿ ನಾನು ಎಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ. ವಿಶ್ವವಿದ್ಯಾನಿಲಯದ ಆಡಳಿತ ಪ್ರತಿಭಟನೆಗೆ ತೆರಳಲು ನಮ್ಮನ್ನು ಒತ್ತಾಯಿಸಿತ್ತು. ಭಿತ್ತಿ ಪತ್ರಗಳನ್ನೂ ಅವರೇ ನೀಡಿದ್ದು” ಎಂದಿದ್ದಾರೆ.

“ಪ್ರತಿಭಟನೆಯಲ್ಲಿ ಉತ್ತಮ ಮುದ್ರಿತ ಪೋಸ್ಟರ್‌ ಬಳಸಲು ನಮ್ಮ ಬಳಿ ಹಣ ಇರಲಿಲ್ಲ. ಹಾಗಾಗಿ, ಚಾರ್ಟ್ ಪೇಪರ್‌ನಲ್ಲಿ ಭಿತ್ತಿ ಪತ್ರಗಳನ್ನು ಕೈಯಿಂದ ಬರೆದಿದ್ದೆವು. ಅವುಗಳ ಎಲ್ಲಾ ವಿಡಿಯೋಗಳನ್ನು ಇನ್‌ಸ್ಟಾ ಹ್ಯಾಂಡಲ್‌ನಿಂದ ತೆಗೆಸಲಾಗಿದೆ. ಐಎಎಸ್ ಆಗಬೇಕೆಂಬುದು ನನ್ನ ಕನಸು. ನಾವು ಯಾವುದೇ ರಾಜಕೀಯದಲ್ಲಿ ಇಲ್ಲ. ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವುದಾಗಿ ವಿವಿ ಆಡಳಿತ ನಮಗೆ ಭರವಸೆ ನೀಡಿತ್ತು” ಎಂದು ವಿದ್ಯಾರ್ಥಿನಿ ಸತ್ಯ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಒಂದೆಡೆ ಟ್ರೋಲ್ ಆಗುತ್ತಿದ್ದರೆ, ಮತ್ತೊಂದೆಡೆ ಗಾಲ್ಗೋಟಿಯಾಸ್ ವಿವಿ ಕಾಲೇಜಿನ ಸಿಇಒ ಎನ್ನಲಾದ ಧ್ರುವ್ ಗಾಲ್ಗೋಟಿಯಾ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಗಾಲ್ಗೋಟಿಯಾಸ್ ವಿವಿಯ ವಿದ್ಯಾರ್ಥಿಗಳು ಧೈರ್ಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಧ್ರವ್ ಅವರ ಪೋಸ್ಟನ್ನು ಉಲ್ಲೇಖಿಸಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಗಾಲ್ಗೋಟಿಯಾಸ್ ಕಾಲೇಜಿನ ಸಿಇಒ ಧ್ರುವ ಗಾಲ್ಗೋಟಿಯಾ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ (ವಿದ್ಯಾರ್ಥಿಗಳಿಗೆ) ಹಿಂದಿ. ಇಂಗ್ಲಿಷ್ ಕೂಡ ಓದಲು ಬರುವುದಿಲ್ಲ. ಆದರೆ, ವಿದ್ಯಾರ್ಥಿಗಳು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಇಒ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ, ಅವರನ್ನೇ ಹೊಣೆಗಾರರನ್ನಾಗಿಸಬೇಕು ಮತ್ತು ಅವರು ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಏನು ಮಾಡುತ್ತಿದ್ದಾರೆ? ಅವೆಲ್ಲವೂ ವಾಟ್ಸಾಪ್‌ ಯೂನಿವರ್ಸಿಟಿ ಉತ್ಪನ್ನಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....