Homeಮುಖಪುಟಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

- Advertisement -
- Advertisement -

ಕಾಂಗ್ರೆಸ್ ವಿರುದ್ದ ಪ್ರತಿಭಟಿಸುವ ಮೂಲಕ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಿನ್ನೆಯಿಂದ (ಮೇ 1) ಭಾರೀ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್‌ ವಿರುದ್ದ ಹಲವು ಆರೋಪಗಳನ್ನು ಹೊರಿಸಿ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance tax), ನಗರ ನಕ್ಸಲರು (Urban Naxalism) ಇತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಆಜ್‌ತಕ್ ಸುದ್ದಿ ವಾಹಿನಿಯ ವರದಿಗಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ.

ವರದಿಗಾರ “ನೀವು ಏಕೆ, ಪ್ರತಿಭಟಿಸುತ್ತಿದ್ದೀರಿ?” ಎಂದು ಕೇಳಿದ್ದಕ್ಕೆ, ಕೆಲ ವಿದ್ಯಾರ್ಥಿಗಳು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ತರಲಿದೆ” ಎಂದಿದ್ದಾರೆ. “ಪಿತ್ರಾರ್ಜಿತ ಆಸ್ತಿ ತೆರಿಗೆ ಎಂದರೇನು?” ಎಂದು ವರದಿಗಾರ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಉತ್ತರಿಸಲು ತಡವರಿಸಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ತಾವು ಹಿಡಿದಿದ್ದ ಭಿತ್ತಿ ಪತ್ರವನ್ನು ಸರಿಯಾಗಿ ಓದಲು ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿದ್ಯಾರ್ಥಿಗಳಿಗೆ ತಾವು ಏಕೆ ಪ್ರತಿಭಟಿಸುತ್ತೀದ್ದೇವೆ ಎಂದೇ ಗೊತ್ತಿರಲಿಲ್ಲ.

ಆಜ್‌ತಕ್‌ ವರದಿ ಪ್ರಸಾರಗೊಂಡ ತಕ್ಷಣ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಜನರು ವಿಡಿಯೋ ಹಂಚಿಕೊಂಡು, “ಈ ವಿದ್ಯಾರ್ಥಿಗಳು ಮೋದಿಯ ವಾಟ್ಸಾಪ್ ಯೂನಿವರ್ಸಿಟಿಯವರು” ಎಂದು ಟ್ರೋಲ್ ಮಾಡಿದ್ದಾರೆ. ಎಕ್ಸ್‌ನಲ್ಲಿ ‘ಗಾಲ್ಗೋಟಿಯಾಸ್ ಯೂನಿವರ್ಸಿಟಿ’ ಟ್ರೆಡಿಂಗ್ ಆಗಿದೆ.

ಕ್ಷಮಿಸುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು :

ತಮ್ಮ ವಿಡಿಯೋ ದೇಶದಾದ್ಯಂತ ವೈರಲ್ ಆಗುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಕೇಳಿದ್ದು, ಪ್ರತಿಭಟನೆಯ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಲಕ್ಷೀ ಶರ್ಮಾ ಎಂಬ ವಿದ್ಯಾರ್ಥಿನಿ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿ ” ನಮ್ಮ ತಪ್ಪುಗಳು ನಮಗೆ ಅರಿವಾಗಿದೆ. ನಮಗೆ ಅದು ಪ್ರೊಪಗೊಂಡ ಕಾರ್ಯಕ್ರಮ ಎಂದು ಗೊತ್ತಿರಲಿಲ್ಲ. ಕಂಗನಾ ರಣಾವತ್ ಅವರನ್ನು ಭೇಟಿಯಾಗುವ ಅವಕಾಶ ಸಿಗಲಿದೆ ಎಂದು ನಮಗೆ ಹೇಳಲಾಗಿತ್ತು. ವಿದ್ಯಾರ್ಥಿ ಪರಿಷತ್ತಿನ ಪರವಾಗಿ ನಾನು ಎಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ. ವಿಶ್ವವಿದ್ಯಾನಿಲಯದ ಆಡಳಿತ ಪ್ರತಿಭಟನೆಗೆ ತೆರಳಲು ನಮ್ಮನ್ನು ಒತ್ತಾಯಿಸಿತ್ತು. ಭಿತ್ತಿ ಪತ್ರಗಳನ್ನೂ ಅವರೇ ನೀಡಿದ್ದು” ಎಂದಿದ್ದಾರೆ.

“ಪ್ರತಿಭಟನೆಯಲ್ಲಿ ಉತ್ತಮ ಮುದ್ರಿತ ಪೋಸ್ಟರ್‌ ಬಳಸಲು ನಮ್ಮ ಬಳಿ ಹಣ ಇರಲಿಲ್ಲ. ಹಾಗಾಗಿ, ಚಾರ್ಟ್ ಪೇಪರ್‌ನಲ್ಲಿ ಭಿತ್ತಿ ಪತ್ರಗಳನ್ನು ಕೈಯಿಂದ ಬರೆದಿದ್ದೆವು. ಅವುಗಳ ಎಲ್ಲಾ ವಿಡಿಯೋಗಳನ್ನು ಇನ್‌ಸ್ಟಾ ಹ್ಯಾಂಡಲ್‌ನಿಂದ ತೆಗೆಸಲಾಗಿದೆ. ಐಎಎಸ್ ಆಗಬೇಕೆಂಬುದು ನನ್ನ ಕನಸು. ನಾವು ಯಾವುದೇ ರಾಜಕೀಯದಲ್ಲಿ ಇಲ್ಲ. ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವುದಾಗಿ ವಿವಿ ಆಡಳಿತ ನಮಗೆ ಭರವಸೆ ನೀಡಿತ್ತು” ಎಂದು ವಿದ್ಯಾರ್ಥಿನಿ ಸತ್ಯ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಒಂದೆಡೆ ಟ್ರೋಲ್ ಆಗುತ್ತಿದ್ದರೆ, ಮತ್ತೊಂದೆಡೆ ಗಾಲ್ಗೋಟಿಯಾಸ್ ವಿವಿ ಕಾಲೇಜಿನ ಸಿಇಒ ಎನ್ನಲಾದ ಧ್ರುವ್ ಗಾಲ್ಗೋಟಿಯಾ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಗಾಲ್ಗೋಟಿಯಾಸ್ ವಿವಿಯ ವಿದ್ಯಾರ್ಥಿಗಳು ಧೈರ್ಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಧ್ರವ್ ಅವರ ಪೋಸ್ಟನ್ನು ಉಲ್ಲೇಖಿಸಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಗಾಲ್ಗೋಟಿಯಾಸ್ ಕಾಲೇಜಿನ ಸಿಇಒ ಧ್ರುವ ಗಾಲ್ಗೋಟಿಯಾ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ (ವಿದ್ಯಾರ್ಥಿಗಳಿಗೆ) ಹಿಂದಿ. ಇಂಗ್ಲಿಷ್ ಕೂಡ ಓದಲು ಬರುವುದಿಲ್ಲ. ಆದರೆ, ವಿದ್ಯಾರ್ಥಿಗಳು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಇಒ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ, ಅವರನ್ನೇ ಹೊಣೆಗಾರರನ್ನಾಗಿಸಬೇಕು ಮತ್ತು ಅವರು ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಏನು ಮಾಡುತ್ತಿದ್ದಾರೆ? ಅವೆಲ್ಲವೂ ವಾಟ್ಸಾಪ್‌ ಯೂನಿವರ್ಸಿಟಿ ಉತ್ಪನ್ನಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...