Homeಮುಖಪುಟಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

- Advertisement -
- Advertisement -

ಕಾಂಗ್ರೆಸ್ ವಿರುದ್ದ ಪ್ರತಿಭಟಿಸುವ ಮೂಲಕ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಿನ್ನೆಯಿಂದ (ಮೇ 1) ಭಾರೀ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್‌ ವಿರುದ್ದ ಹಲವು ಆರೋಪಗಳನ್ನು ಹೊರಿಸಿ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance tax), ನಗರ ನಕ್ಸಲರು (Urban Naxalism) ಇತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಆಜ್‌ತಕ್ ಸುದ್ದಿ ವಾಹಿನಿಯ ವರದಿಗಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ.

ವರದಿಗಾರ “ನೀವು ಏಕೆ, ಪ್ರತಿಭಟಿಸುತ್ತಿದ್ದೀರಿ?” ಎಂದು ಕೇಳಿದ್ದಕ್ಕೆ, ಕೆಲ ವಿದ್ಯಾರ್ಥಿಗಳು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ತರಲಿದೆ” ಎಂದಿದ್ದಾರೆ. “ಪಿತ್ರಾರ್ಜಿತ ಆಸ್ತಿ ತೆರಿಗೆ ಎಂದರೇನು?” ಎಂದು ವರದಿಗಾರ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಉತ್ತರಿಸಲು ತಡವರಿಸಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ತಾವು ಹಿಡಿದಿದ್ದ ಭಿತ್ತಿ ಪತ್ರವನ್ನು ಸರಿಯಾಗಿ ಓದಲು ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿದ್ಯಾರ್ಥಿಗಳಿಗೆ ತಾವು ಏಕೆ ಪ್ರತಿಭಟಿಸುತ್ತೀದ್ದೇವೆ ಎಂದೇ ಗೊತ್ತಿರಲಿಲ್ಲ.

ಆಜ್‌ತಕ್‌ ವರದಿ ಪ್ರಸಾರಗೊಂಡ ತಕ್ಷಣ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಜನರು ವಿಡಿಯೋ ಹಂಚಿಕೊಂಡು, “ಈ ವಿದ್ಯಾರ್ಥಿಗಳು ಮೋದಿಯ ವಾಟ್ಸಾಪ್ ಯೂನಿವರ್ಸಿಟಿಯವರು” ಎಂದು ಟ್ರೋಲ್ ಮಾಡಿದ್ದಾರೆ. ಎಕ್ಸ್‌ನಲ್ಲಿ ‘ಗಾಲ್ಗೋಟಿಯಾಸ್ ಯೂನಿವರ್ಸಿಟಿ’ ಟ್ರೆಡಿಂಗ್ ಆಗಿದೆ.

ಕ್ಷಮಿಸುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು :

ತಮ್ಮ ವಿಡಿಯೋ ದೇಶದಾದ್ಯಂತ ವೈರಲ್ ಆಗುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಕೇಳಿದ್ದು, ಪ್ರತಿಭಟನೆಯ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಲಕ್ಷೀ ಶರ್ಮಾ ಎಂಬ ವಿದ್ಯಾರ್ಥಿನಿ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿ ” ನಮ್ಮ ತಪ್ಪುಗಳು ನಮಗೆ ಅರಿವಾಗಿದೆ. ನಮಗೆ ಅದು ಪ್ರೊಪಗೊಂಡ ಕಾರ್ಯಕ್ರಮ ಎಂದು ಗೊತ್ತಿರಲಿಲ್ಲ. ಕಂಗನಾ ರಣಾವತ್ ಅವರನ್ನು ಭೇಟಿಯಾಗುವ ಅವಕಾಶ ಸಿಗಲಿದೆ ಎಂದು ನಮಗೆ ಹೇಳಲಾಗಿತ್ತು. ವಿದ್ಯಾರ್ಥಿ ಪರಿಷತ್ತಿನ ಪರವಾಗಿ ನಾನು ಎಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ. ವಿಶ್ವವಿದ್ಯಾನಿಲಯದ ಆಡಳಿತ ಪ್ರತಿಭಟನೆಗೆ ತೆರಳಲು ನಮ್ಮನ್ನು ಒತ್ತಾಯಿಸಿತ್ತು. ಭಿತ್ತಿ ಪತ್ರಗಳನ್ನೂ ಅವರೇ ನೀಡಿದ್ದು” ಎಂದಿದ್ದಾರೆ.

“ಪ್ರತಿಭಟನೆಯಲ್ಲಿ ಉತ್ತಮ ಮುದ್ರಿತ ಪೋಸ್ಟರ್‌ ಬಳಸಲು ನಮ್ಮ ಬಳಿ ಹಣ ಇರಲಿಲ್ಲ. ಹಾಗಾಗಿ, ಚಾರ್ಟ್ ಪೇಪರ್‌ನಲ್ಲಿ ಭಿತ್ತಿ ಪತ್ರಗಳನ್ನು ಕೈಯಿಂದ ಬರೆದಿದ್ದೆವು. ಅವುಗಳ ಎಲ್ಲಾ ವಿಡಿಯೋಗಳನ್ನು ಇನ್‌ಸ್ಟಾ ಹ್ಯಾಂಡಲ್‌ನಿಂದ ತೆಗೆಸಲಾಗಿದೆ. ಐಎಎಸ್ ಆಗಬೇಕೆಂಬುದು ನನ್ನ ಕನಸು. ನಾವು ಯಾವುದೇ ರಾಜಕೀಯದಲ್ಲಿ ಇಲ್ಲ. ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವುದಾಗಿ ವಿವಿ ಆಡಳಿತ ನಮಗೆ ಭರವಸೆ ನೀಡಿತ್ತು” ಎಂದು ವಿದ್ಯಾರ್ಥಿನಿ ಸತ್ಯ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಒಂದೆಡೆ ಟ್ರೋಲ್ ಆಗುತ್ತಿದ್ದರೆ, ಮತ್ತೊಂದೆಡೆ ಗಾಲ್ಗೋಟಿಯಾಸ್ ವಿವಿ ಕಾಲೇಜಿನ ಸಿಇಒ ಎನ್ನಲಾದ ಧ್ರುವ್ ಗಾಲ್ಗೋಟಿಯಾ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಗಾಲ್ಗೋಟಿಯಾಸ್ ವಿವಿಯ ವಿದ್ಯಾರ್ಥಿಗಳು ಧೈರ್ಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಧ್ರವ್ ಅವರ ಪೋಸ್ಟನ್ನು ಉಲ್ಲೇಖಿಸಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಗಾಲ್ಗೋಟಿಯಾಸ್ ಕಾಲೇಜಿನ ಸಿಇಒ ಧ್ರುವ ಗಾಲ್ಗೋಟಿಯಾ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ (ವಿದ್ಯಾರ್ಥಿಗಳಿಗೆ) ಹಿಂದಿ. ಇಂಗ್ಲಿಷ್ ಕೂಡ ಓದಲು ಬರುವುದಿಲ್ಲ. ಆದರೆ, ವಿದ್ಯಾರ್ಥಿಗಳು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಇಒ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ, ಅವರನ್ನೇ ಹೊಣೆಗಾರರನ್ನಾಗಿಸಬೇಕು ಮತ್ತು ಅವರು ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಏನು ಮಾಡುತ್ತಿದ್ದಾರೆ? ಅವೆಲ್ಲವೂ ವಾಟ್ಸಾಪ್‌ ಯೂನಿವರ್ಸಿಟಿ ಉತ್ಪನ್ನಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...