Homeಅಂತರಾಷ್ಟ್ರೀಯಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

- Advertisement -
- Advertisement -

ಜೂನ್‌ 15 ರಂದು ಚೀನಾ ಮತ್ತು ಭಾರತೀಯ ಸೇನೆಯ ನಡುವೆ ಗಾಲ್ವಾನ್‌ ಕಣಿವೆಯಲ್ಲಿ ನಡೆದ ಘರ್ಷಣೆಗೆ ಚೀನಾ ಸರ್ಕಾರ ಮೊದಲೇ ಯೋಜನೆ ರೂಪಿಸಿತ್ತು ಎಂದು ಅಮೆರಿಕ ಕಾಂಗ್ರೆಸ್‌ಗೆ ಸಲ್ಲಿಕೆಯಾಗಿರುವ ಇತ್ತೀಚಿನ ವರದಿಯಲ್ಲಿ ಹೇಳಲಾಗಿದೆ. ಈ ಯೋಜನೆಯಂತೆ ಅಲ್ಲಿ ಸಾಕಷ್ಟು ಸಾವುನೋವುಗಳನ್ನು ಉಂಟು ಮಾಡುವುದೇ ಅದರ ದುರುದ್ದೇಶವಾಗಿತ್ತೆಂದು ಅದು ಹೇಳಿದೆ.

ಮಂಗಳವಾರ ಪ್ರಕಟವಾದ ಈ ವರದಿಯಲ್ಲಿ, ತನ್ನ ನೆರೆಹೊರೆಯ ರಾಷ್ಟ್ರಗಳ ವಿರುದ್ಧ ಚೀನಾವು ಹಲವಾರು ವರ್ಷಗಳಿಂದ ಬೆದರಿಸುವ ಅಭಿಯಾನವನ್ನು ನಡೆಸುತ್ತಾ ಬಂದಿದ್ದು, ಜಪಾನ್‌, ಭಾರತ ಸೇರಿದಂತೆ ಆಗ್ನೇಯ ಏಷ್ಯಾದ ರಾಷ್ಟ್ರಗಳ ಜೊತೆ ಮಿಲಿಟರಿ ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ-ಭಾರತದ ಸಂಬಂಧಗಳ ವಿಷಯದಲ್ಲಿ 2020 ಅತ್ಯಂತ ‘ಕೆಟ್ಟ ವರ್ಷ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಗಲ್ವಾನ್ ಸಂಘರ್ಷವು 1975ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಎರಡೂ ಕಡೆಯ ಸೈನಿಕರ ಸಾವು, ನೋವಿಗೆ ಕಾರಣವಾಗಿದೆಯೆಂದು ವರದಿ ತಿಳಿಸಿದೆ.

ಶಾಂತಿ ಕಾಲದಲ್ಲಿ ಚೀನಾ ಆಡಳಿತ ಪಕ್ಷವು ತನ್ನ ಸಶಸ್ತ್ರ ಪಡೆಗಳನ್ನು ಬೆದರಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ತೈವಾನ್ ಮತ್ತು ದಕ್ಷಿಣ ಚೀನಾ ಸಾಗರಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಸಮರಾಭ್ಯಾಸಗಳನ್ನು ನಡೆಸಿ ಭೀತಿ ಮೂಡಿಸಲು ಯತ್ನಿಸುತ್ತಿದೆ ಎಂದು ವರದಿ ಹೇಳಿದೆ.

ಚೀನಾದ ಆಕ್ರಮಣಕಾರಿ ಕ್ರಮಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ‘ಅಮೆರಿಕ-ಚೀನಾ ಆಯೋಗ’ ಅಮೆರಿಕ ಕಾಂಗ್ರೆಸ್‌ಗೆ ವಿವರವಾದ ಈ ವರದಿಯನ್ನು ನೀಡಿದೆ. ಅಮೆರಿಕ ಮತ್ತು ಚೀನಾ ನಡುವಿನ ಭದ್ರತೆ ಮತ್ತು ವ್ಯಾಪಾರ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು 2000 ನೇ ಅಕ್ಟೋಬರ್‌ನಲ್ಲಿ ‘ಅಮೆರಿಕ-ಚೀನಾ ಆಯೋಗ’ವನ್ನು ರಚಿಸಲಾಗಿತ್ತು.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಈ ಸಂಘರ್ಷದಿಂದ ಭಾರತದ ಸುಮಾರು 20 ಯೋಧರು ಸಾವನ್ನಪ್ಪಿದ್ದರು. ಚೀನಾ ಕೂಡಾ ಸಾವು ನೋವುಗಳಾಗಿತ್ತು ಎಂದು ಒಪ್ಪಿಕೊಂಡಿದ್ದರೂ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸಿರಲಿಲ್ಲ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...