Homeಅಂತರಾಷ್ಟ್ರೀಯಗಾಲ್ವಾನ್ ಘರ್ಷಣೆಯ ಬಗ್ಗೆ ಭಾರತ ನಮಗೆ ಮಾಹಿತಿ ನೀಡಿಲ್ಲ: ಬಾಂಗ್ಲಾದೇಶ

ಗಾಲ್ವಾನ್ ಘರ್ಷಣೆಯ ಬಗ್ಗೆ ಭಾರತ ನಮಗೆ ಮಾಹಿತಿ ನೀಡಿಲ್ಲ: ಬಾಂಗ್ಲಾದೇಶ

ಭಾರತ ಅಥವಾ ಚೀನಾ ಯಾವುದೂ ಕೂಡ ನಮ್ಮ ಬೆಂಬಲ ಕೇಳಿಲ್ಲ. ಅವರಲ್ಲಿ ಯಾರೂ ನಮಗೆ ಏನನ್ನೂ ಹೇಳಿಲ್ಲ ಮತ್ತು ಈ ವಿಷಯದ ಬಗ್ಗೆ ನಮಗೆ ಏನೂ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಲಡಾಖ್‌ನಲ್ಲಿನ ಭಾರತ-ಚೀನಾ ಉದ್ವಿಗ್ನತೆಯ ಬಗ್ಗೆ ಬಾಂಗ್ಲಾದೇಶಕ್ಕೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಭಾರತದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಗಾಲ್ವಾನ್ ಕಣಿವೆ ಘರ್ಷಣೆಯ ಬಗ್ಗೆ ನವದೆಹಲಿಯು ಯಾವುದೇ ಮೌಖಿಕ ಟಿಪ್ಪಣಿಗಳನ್ನು ಕಳುಹಿಸಿಲ್ಲ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಭಾರತ-ಚೀನಾ ಗಡಿ ಉದ್ವಿಗ್ನತೆಯ ಬಗ್ಗೆ ಬಾಂಗ್ಲಾದೇಶಕ್ಕೆ ಸಂಪೂರ್ಣವಾಗಿ ವಿವರಿಸಿದೆ. ಈ ವಿಷಯದಲ್ಲಿ ಅವರು ನಮ್ಮೊಂದಿಗಿದ್ದಾರೆ ಎಂಬ ವಿಶ್ವಾಸವಿದೆ ಎಂದು ಭಾರತೀಯ ಅಧಿಕಾರಿ ಹೇಳಿದ್ದಾರೆ.

ದಿ ಢಾಕಾ ಟ್ರಿಬ್ಯೂನ್ ನ ಶುಕ್ರವಾರದ ವರದಿಯ ಪ್ರಕಾರ, ಭಾರತ-ಚೀನಾ ಉದ್ವಿಗ್ನತೆಯನ್ನು, ಪ್ರಧಾನಿ ನರೇಂದ್ರ ಮೋದಿಯವರು ‘ಭಾರತೀಯ ಭೂಪ್ರದೇಶದ ಒಂದು ಇಂಚು ಸಹ ಆಕ್ರಮಿಸಿಕೊಂಡಿಲ್ಲ’ ಎಂಬ ಹೇಳಿಕೆಯನ್ನು ಅಬ್ದುಲ್ ಮೊಮೆನ್ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಜೂನ್ 15 ರ ಗಾಲ್ವಾನ್ ಘರ್ಷಣೆಯ ಕುರಿತು ಭಾರತ ಸರ್ಕಾರವು ತಮ್ಮ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಯಾವುದೇ ಮೌಖಿಕ ಟಿಪ್ಪಣಿಗಳನ್ನು ನಮಗೆ ಕಳುಹಿಸಲಿಲ್ಲ. ಪರಿಣಾಮವಾಗಿ ನಾವು ಯಾವುದೇ ಹೇಳಿಕೆ ನೀಡಲಿಲ್ಲ ಎಂದು ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಭಾರತ ಅಥವಾ ಚೀನಾ ಯಾವುದೂ ಕೂಡ ನಮ್ಮ ಬೆಂಬಲ ಕೇಳಿಲ್ಲ. ಅವರಲ್ಲಿ ಯಾರೂ ನಮಗೆ ಏನನ್ನೂ ಹೇಳಿಲ್ಲ ಮತ್ತು ಈ ವಿಷಯದ ಬಗ್ಗೆ ನಮಗೆ ಏನೂ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ)ಯ ಚೀನಾದ ಆಕ್ರಮಣಗಳೊಂದಿಗೆ ಮೇ ತಿಂಗಳಲ್ಲಿ, ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಪ್ರಾರಂಭವಾಯಿತು. ಜೂನ್ 15 ರಂದು ಗಾಲ್ವನ್ ಕಣಿವೆಯಲ್ಲಿ ತೀವ್ರ ಸಂಘರ್ಷ ಉಂಟಾಯಿತು. ಈ ಬಗ್ಗೆ ಇಲ್ಲಿಯವರೆಗೆ, ಯುಎಸ್, ಯುಕೆ, ರಷ್ಯಾ, ಜರ್ಮನಿ ಮುಂತಾದ ದೇಶಗಳಿಗೆ ಭಾರತವು ಪರಿಸ್ಥಿತಿಯನ್ನು ವಿವರಿಸಿದೆ.

ಕಳೆದ ನಾಲ್ಕು ತಿಂಗಳಿನಿಂದ ಬಾಂಗ್ಲಾ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಭೇಟಿಗೆ ಸಮಯ ಕೇಳಿಯೂ ಬಾಂಗ್ಲಾ ಸಮಯ ನೀಡಿಲ್ಲ ಎಂದು ಭಾರತೀಯ ಹೈಕಮಿಷನರ್ ರಿವಾ ಗಂಗೂಲಿ ದಾಸ್ ಹೇಳಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಸಹ ಮೊಮೆನ್ ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...