Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...