Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...