Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...