Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...