Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...