Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...