Homeಮುಖಪುಟವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

ವಾಯು ಮಾಲಿನ್ಯ ಸಭೆಗೆ ಗಂಭೀರ್‌ ಚಕ್ಕರ್‌: ಕೇವಲ ಕಮೆಂಟ್ರಿ ಬಾಕ್ಸ್‌ಗೆ ’ಗಂಭೀರ’ತೆ ಸೀಮಿತ..!?

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಸರಿಪಡಿಸಲು ತಲೆಕೆಡಿಸಿಕೊಂಡಿದೆ. ಇಂದು ವಾಯು ಮಾಲಿನ್ಯ ಕಡಿಮೆ ಮಾಡಲು ಪರಿಹಾರೋಪಾಯ ಕಂಡುಕೊಳ್ಳಲು ನಗರ ವಿಕಾಸ್‌ ಸಚಿವಾಲಯದಿಂದ ಸಂಸದೀಯ ಸಭೆ ಕರೆಯಲಾಗಿತ್ತು. ಅತ್ತ ದೆಹಲಿಯಲ್ಲಿ ಮುಖ್ಯ ಸಭೆ ನಡೆಯುತ್ತಿದ್ದರೆ, ಅದೇ ಸಮಯದಲ್ಲಿ ಇತ್ತ ಸಂಸದ ಗೌತಮ್‌ ಗಂಭೀರ್‌ ಸಭೆಗೆ ಚಕ್ಕರ್‌ ಹೊಡೆದು ಇಂದೋರ್‌ನಲ್ಲಿ ಜಿಲೇಬಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿ ವಾಯು ಮಾಲಿನ್ಯ ತಗ್ಗಿಸಲು, ಮುಖ್ಯ ಪರಿಹಾರೋಪಾಯ ಕಂಡು ಹಿಡಿಯಲು ನಡೆದ ಸಭೆಯಲ್ಲಿ ಭಾಗಿಯಾಗದ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ…ಆಮ್‌ ಆದ್ಮಿ ಪಕ್ಷ, ವಾಯು ಮಾಲಿನ್ಯದಂಥ ಗಂಭೀರ ವಿಷಯದ ಬಗ್ಗೆ ಗೌತಮ್‌ ಗಂಭೀರ್‌ ಅವರಿಗಿರುವ ಗಂಭೀರತೆ ಕೇವಲ ಕಮೆಂಟ್ರಿ ಬಾಕ್ಸ್‌ಗೆ ಸೀಮಿತವಾಗಿದೆಯಾ..? ಅಂತಾ ಟೀಕಿಸಿದೆ.

ಈಗ ದೆಹಲಿಯಲ್ಲಿ ಹೆಚ್ಚಿರುವ ವಾಯು ಮಾಲಿನ್ಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡು, ರಾಜಕೀಯ ನಾಯಕರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಹಲವು ನಾಯಕರು ಹಾಜರಾಗಿರಲಿಲ್ಲ.

ದೆಹಲಿ ಮತ್ತು ಎನ್‌ಸಿಆರ್‌ ನಲ್ಲಿ ಹೆಚ್ಚಿರುವ ವಿಷಕಾರಕ ವಾಯು ಮಾಲಿನ್ಯದ ಬಗ್ಗೆ ಪರಿಹಾರ ಕಂಡುಕೊಳ್ಳಲು ಮಧ್ಯಾಹ್ನ ಆಮ್‌ ಆದ್ಮಿ ಪಕ್ಷದಿಂದ ಪ್ರಮುಖ ಸಭೆ ಕರೆಯಲಾಗಿತ್ತು. ಈ ಬಗ್ಗೆ ಒಂದು ವಾರದ ಮೊದಲೇ ಎಲ್ಲರಿಗೂ ತಿಳಿಸಲಾಗಿತ್ತು. ಹೀಗಿದ್ದರೂ ಸಹ ಇಡೀ ದೆಹಲಿ ಜನರ ಉಸಿರಿನ ಸಮಸ್ಯೆಯಾಗಿರುವ ವಾಯು ಮಾಲಿನ್ಯದ ಬಗ್ಗೆ ಚರ್ಚಿಸಲು ಗೌತಮ್‌ ಗಂಭೀರ್‌ ಚಕ್ಕರ್‌ ಹೊಡೆದು, ಗೆಳೆಯರೊಂದಿಗೆ ಜಿಲೇಬಿ ತಿನ್ನುತ್ತಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗಾದ್ರೆ ಗಂಭೀರ್‌ ಅವರ ಗಂಭೀರತೆ ಕಮೆಂಟ್ರಿ ಬಾಕ್ಸ್‌ಗೆ ಮಾತ್ರ ಸೀಮಿತವಾಗಿದೆಯಾ..? ಎಂದು ಆಮ್‌ ಆದ್ಮಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಇಂದು ನಡೆದ ಸಂಸದೀಯ ಸಭೆಯಲ್ಲಿ ಕೆಲವೇ ಕೆಲ ಸಂಸದರು ಸಭೆಗೆ ಹಾಜರಾಗಿದ್ದರು. ಕಮಿಟಿ ಪರವಾಗಿ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡುವಂತೆ ಹೇಳಲಾಗಿತ್ತು. ಆದರೆ ಅವರ್‍ಯಾರೂ ಸಭೆಗೆ ಬಾರದೇ ಕಿರಿಯ ಅಧಿಕಾರಿಗಳನ್ನು ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಸಮಿತಿಯ ಮುಖ್ಯಸ್ಥೆ ಜಗದಂಬಿಕಾ ಅವರು ಕೋಪಗೊಂಡರು. ಹೀಗಾಗಿ ಪ್ರಸೆಂಟೇಷನ್‌ ಕೂಡ ನಡೆಯಲಿಲ್ಲ. ಈ ಸಮಿತಿಯ ಸದಸ್ಯರಾಗಿರುವ ಗೌತಮ್‌ ಗಂಭೀರ್‌ ಕೂಡ ಸಭೆಗೆ ಹಾಜರಾಗದೇ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಮ್ಯಾಚ್‌ ನೋಡುತ್ತ ಕಮೆಂಟ್ರಿ ಮಾಡ್ತಿದ್ದಾರೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ: ಇಡಿ ವಕೀಲರ ವಿರುದ್ಧ ಸುಪ್ರೀಂ ಗರಂ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸಿ ಹೋಗಿದೆ. ವಿಷಕಾರಕ ಹೊಗೆಯಿಂದ ದೆಹಲಿ ಜನತೆಯ ಉಸಿರಿಗೆ ಆಪತ್ತು ಬಂದಿದೆ. 15 ದಿನಗಳಾದರೂ ದೆಹಲಿಯ ವಾಯು ಗುಣಮಟ್ಟ ಸುಧಾರಿಸುವ ಯಾವುದೇ ಲಕ್ಷಣಗಳೇ ಕಾಣ್ತಿಲ್ಲ. ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ವಾಯು ಮಾಲಿನ್ಯ ಕಡಿಮೆ ಮಾಡಲು ಶೀಘ್ರ ಪರಿಹಾರೋಪಾಯ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...