Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...