Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...