Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...