Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...