Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...