Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...