Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...