Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...