Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...