Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...