Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...