Homeಮುಖಪುಟರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

‘ಗಾಂಧೀಜಿಯವರು ಪಂಚೆ ಮಾತ್ರವೇ ತನ್ನ ಉಡುಗೆಯೆಂದು ನಿರ್ಧರಿಸಿ ನೂರು ವರ್ಷವಾಯಿತು’ ಎಂದು ರಾಮ್‌ರಾಜ್‌ ಸಂಸ್ಥೆ ನೀಡಿರುವ ಜಾಹೀರಾತು ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

- Advertisement -
- Advertisement -

‘ಪಂಚೆ ಮಾತ್ರವೇ ತನ್ನ ಉಡುಗೆಯೆಂದು ಗಾಂಧೀಜಿಯವರು ಘೋಷಿಸಿ ನೂರು ವರ್ಷಗಳಾಯಿತು’ ಎಂದು ರಾಮ್‌ರಾಜ್‌ ಕಾಟನ್‌ ಸಂಸ್ಥೆ ನೀಡಿರುವ ಜಾಹೀರಾತು (ಸೆ.22, ಬುಧವಾರ) ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

‘ಪ್ರಜಾವಾಣಿ’ ದಿನಪತ್ರಿಕೆಯ ಮುಖಮುಖಪುಟದಲ್ಲಿ ಪ್ರಕಟವಾಗಿರುವ ಜಾಹೀರಾತನ್ನುಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕ ಓದುಗರು, ಜಾಹೀರಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಅನೇಕರು ಇದು ಬಂಡವಾಳಶಾಹಿ ವ್ಯವಸ್ಥೆಯ ವ್ಯಾಪಾರಿ ಗುಣವಷ್ಟೇ ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನ ಬಳಿಯ ಜವಳಿ ನಗರವೆಂದೇ ಖ್ಯಾತವಾದ ತಿರುಪುರದಲ್ಲಿ 1983ರಲ್ಲಿ ಸ್ಥಾಪನೆಯಾದ ರಾಮ್‌ರಾಜ್‌, ಇಂದು ಭಾರತದಲ್ಲಿ ಮನೆಮಾತಾಗಿರುವ ಬ್ರಾಂಡ್‌ಗಳಲ್ಲಿ ಒಂದಾಗಿದೆ. ದೋತಿ, ಅಂಗಿಗಳು, ಒಳ ಉಡುಪುಗಳು ಇತ್ಯಾದಿ ಉತ್ಪನ್ನಗಳಿಗೆ ರಾಮ್‌ರಾಜ್‌ ಅಚ್ಚುಮೆಚ್ಚಾಗಿದೆ. ಇಂದು ನೀಡಿರುವ ಜಾಹೀರಾತಿನಲ್ಲಿ ಗಾಂಧೀಜಿಯವರ ‘ಪಂಚೆ ಪ್ರೀತಿ’ಯನ್ನು ಸ್ಮರಿಸಲಾಗಿದೆ.

ಜಾಹೀರಾತಿನಲ್ಲಿ ಇರುವುದೇನು?

“ಕಳೆದ 100 ವರ್ಷಗಳ ಹಿಂದೆ ಇದೇ ದಿನದಂದು ತಮಿಳುನಾಡಿನ ಮಧುರೈ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಪಂಚೆ ಮಾತ್ರವೇ ಇನ್ನು ತನ್ನ ಉಡುಗೆಯೆಂದು ನಿರ್ಧರಿಸಿದ, ಮಾನವೀಯತೆ ತುಂಬಿದ ಮಹಾನ್‌ ವ್ಯಕ್ತಿ ಮಹಾತ್ಮಾ ಗಾಂಧೀಜಿಯರಿಗೆ ರಾಮ್‌ರಾಜ್‌ನ ಹೆಮ್ಮೆಯ ಸೆಲ್ಯೂಟ್‌”

ನನ್ನ ಜೀವನದ ಹಾದಿಯಲ್ಲಿ ನಾನು ತೆಗೆದುಕೊಂಡ ಎಲ್ಲಾ ಬದಲಾವಣೆಗಳೂ ಮುಖ್ಯವಾದ ಘಟನೆಳಿಂದಲೇ ನಡೆದಿವೆ. ಈ ನಿರ್ಣಯಗಳು ಆಳವಾದ ಆಲೋಚನೆಯ ನಂತರ ತೆಗೆದುಕೊಂಡವುಗಳು. ಆದುದರಿಂದ ನಾನು ಬೇಸರಗೊಳ್ಳ ಬೇಕಾದುದೇನೂ ಇಲ್ಲ. ನನ್ನಿಂದ ಮಾಡಲು ಸಾಧ್ಯವಾದ ಒಂದೇ ಒಂದು ಸಹಾಯ ನಾನು ತೆಗೆದುಕೊಂಡ ಈ ನಿರ್ಧಾರವೇ. ಮಧುರೈಯಲ್ಲಿ ನನ್ನ ಉಡುಪಿನಲ್ಲಿ ನಾನು ತೆಗೆದುಕೊಂಡ ಈ ಬದಲಾವಣೆಯ ಪರಿಣಾಮವಾಗಿ ನಂತರ ಪಂಚೆ ನನ್ನ ಗುರುತಾಗಿಯೇ ಪರಿಣಮಿಸಿತು.

– ಗಾಂಧೀಜಿ

‘ಪಂಚೆ ನನ್ನ ಗುರುತು’ ಎಂದು ನೀವು ಹೇಳಿದ ನುಡಿಯನ್ನೇ ವೇದವಾಕ್ಯದಂತೆ ಅನುಸರಿಸಿ, 40 ವರ್ಷಗಳಿಂದಲೂ ಪಂಚೆಯನ್ನು ಭಾರತದ ಗುರುತನ್ನಾಗಿಸಿದ್ದು ಮಾತ್ರವಲ್ಲದೆ, ಸಾವಿರಾರು ನೇಕಾರರ ಜೀವನಾಧಾರವನ್ನೂ ಉನ್ನತಮಟ್ಟಕ್ಕೇರಿಸಿದ, ‘ರಾಮ್‌ರಾಜ್‌’ ಎನ್ನುವ ಹೆಮ್ಮೆಯನ್ನು ನಿಮ್ಮ ಪಾದಕಮಲಗಳಿಗೆ ಅರ್ಪಿಸುತ್ತೇವೆ.

– ಇದು ‘ಪ್ರಜಾವಾಣಿ’ಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಸಾರಾಂಶ.

ಜನರ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತಿನ ಪೋಟೋ ಹಂಚಿಕೊಂಡು, “ಪ್ರಜಾವಾಣಿಯಲ್ಲಿ ಪ್ರಕಟವಾದ ಈ ಜಾಹೀರಾತು
ಯಾಕೋ ನನಗಿಷ್ಟವಾಯಿತು
” ಎಂದು ಚಿಂತಕ, ಕಲಾವಿದ ಗಿರಿಧರ್‌ ಕಾರ್ಕಳ ಅವರು ತಮ್ಮ ಎಫ್‌.ಬಿ. ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನನಗೂ ಖಷಿಯಾಯಿತು ಗಿರಿಧರ್. ಅದರೇ ಸಲ್ಪ ಭಯವೂ ಆಯಿತು, ಎಲ್ಲದರೂ ಗಡ್ಡಪ್ಪನ ಪೋಟೋ ಇರಬಹುದೋ ಎಂದು, ಆದರೆ ಇರಲಿಲ್ಲ ಬಚಾವ್’ ಎಂದು ಉದ್ಯಾವರ ನಾಗೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

“ಎಲ್ಲಿ ಸ್ವಲ್ಪ ಸುಳ್ಳು ಕೂಡಾ ಇದೆ . ಅದು 100% ಖಾದಿ ಅಲ್ವಾ? ರಾಮ್‌ರಾಜ್ ಆ ಬಗೆಯದ್ದೇ?” ಎಂದು ವ್ಯಂಗ್ಯಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಪ್ರತಿಕ್ರಿಯಿಸಿದ್ದು, “ಪಂಚೆ ಎಂದಷ್ಟೇ ಉಲ್ಲೇಖಿಸಿರೋದ್ರಿಂದ ನಾವೂ ಪಂಚೆಯ ಕುರಿತೇ ಪಂಚಾತಿಕೆ ಮಾಡೋಣ ಅಲ್ವಾ?” ಎಂದು ಗಿರಿಧರ್‌ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರ ಸಂತತಿ ಹೆಚ್ಚಾಗುತ್ತಿರುವ ಈ ದಿನಮಾನಗಳಲ್ಲಿ ಗಾಂಧೀಜಿಯವರನ್ನು ಅರ್ಥ ಮಾಡಿಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದ್ದಾರೆ. ಹೀಗಾಗಿ ರಾಮ್‌ರಾಮ್‌ ಜಾಹೀರಾತು ದುರಿತ ಕಾಲದ ಹೊಸ ಭರವಸೆ ಎಂಬುದು ಅನೇಕರ ಮನದಾಳ.

ಜಾಹೀರಾತಿನ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಬಂಡವಾಳಶಾಹಿ ಗುಣ ಅದು. ಚಾಲ್ತಿಯಲ್ಲಿರುವ ಎಲ್ಲ ಸಾಂಕೇತಿಕ ಭಾಷೆಗಳನ್ನು, ಸಂಕೇತಗಳನ್ನು ಮತ್ತು ರೂಪಕಗಳನ್ನು ತನ್ನದಾಗಿಸಿಕೊಳ್ಳುತ್ತಾ ವಿಸ್ತರಿಸಿಕೊಳ್ಳುವುದು ಬಂಡವಾಳದ ಲಕ್ಷಣ. ರಾಮರಾಜ್ ಅದನ್ನೇ ಮಾಡಿದೆ ನಾಳೆ ಅದಾನಿ ಅಂಬಾನಿ ಸಹ ಇದನ್ನೇ ಅನುಕರಿಸುತ್ತಾರೆ” ಎಂದು ಚಿಂತಕ ನಾ.ದಿವಾಕರ್‌ ಅಭಿಪ್ರಾಯ ತಾಳಿದ್ದಾರೆ.

ಲೈಂಗಿಕ ರೋಗಗಳ ತಜ್ಞರಾದ ನಡಹಳ್ಳಿ ವಸಂತ್‌ ಪ್ರತಿಕ್ರಿಯಿಸಿದ್ದು, “ವಿಪರ್ಯಾಸವೆಂದರೆ ಗಾಂಧೀಜಿಯೂ ಕಾರ್ಪೋರೇಟ್‌ ಆಸ್ತಿಯಾಗುತ್ತಿದ್ದಾರೆ. ಕೈಮಗ್ಗವನ್ನು ಸ್ವಾಭಿಮಾನದ ಆರ್ಥಿಕ ಸ್ವಾವಲಂಬನೆಯ ಗುರುತಾಗಿ ಪ್ರಾರಂಭಿಸಿದ್ದರು ಗಾಂಧೀಜಿ. ಇವರ ಹೆಸರನ್ನು ಯಂತ್ರಗಳಿಂದ ತಯಾರಿಸುವ ಕಾರ್ಪೋರೇಟ್‌ಗಳು ಬಳಸುತ್ತಿದ್ದಾರೆ. ಎಲ್ಲರೂ ದುರಪಯೋಗ ಪಡಿಸಿಕೊಂಡಮೇಲೂ ಗಾಂಧಿ ಎನ್ನುವ ಹೆಸರು ಪರಿಶುದ್ಧವಾಗಿಯೇ ಉಳಿಯುತ್ತದೆ’ ಎಂದಿದ್ದಾರೆ.

ಒಟ್ಟಾರೆ ಜಾಹೀರಾತಿಯ ಸಂದೇಶ ತಾತ್ವಿಕವಾಗಿ ಒಳ್ಳೆಯದಿದ್ದರೂ ವ್ಯಾಪಾರಿ ಮನೋಭಾವದ ಆಯಾಮಗಳನ್ನು ಅಲ್ಲಗಳೆಯುವಂತಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯಲ್ಲಿ ಕಾರ್ಪೊರೇಟ್‌ ವ್ಯವಸ್ಥೆಯನ್ನು ಗಾಂಧಿ ಒಪ್ಪುವುದಿಲ್ಲ ಎನ್ನುವವರ ವಾದದಲ್ಲಿ ಉರುಳಿದೆ.


ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...