Homeಮುಖಪುಟರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

‘ಗಾಂಧೀಜಿಯವರು ಪಂಚೆ ಮಾತ್ರವೇ ತನ್ನ ಉಡುಗೆಯೆಂದು ನಿರ್ಧರಿಸಿ ನೂರು ವರ್ಷವಾಯಿತು’ ಎಂದು ರಾಮ್‌ರಾಜ್‌ ಸಂಸ್ಥೆ ನೀಡಿರುವ ಜಾಹೀರಾತು ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

- Advertisement -
- Advertisement -

‘ಪಂಚೆ ಮಾತ್ರವೇ ತನ್ನ ಉಡುಗೆಯೆಂದು ಗಾಂಧೀಜಿಯವರು ಘೋಷಿಸಿ ನೂರು ವರ್ಷಗಳಾಯಿತು’ ಎಂದು ರಾಮ್‌ರಾಜ್‌ ಕಾಟನ್‌ ಸಂಸ್ಥೆ ನೀಡಿರುವ ಜಾಹೀರಾತು (ಸೆ.22, ಬುಧವಾರ) ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

‘ಪ್ರಜಾವಾಣಿ’ ದಿನಪತ್ರಿಕೆಯ ಮುಖಮುಖಪುಟದಲ್ಲಿ ಪ್ರಕಟವಾಗಿರುವ ಜಾಹೀರಾತನ್ನುಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕ ಓದುಗರು, ಜಾಹೀರಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಅನೇಕರು ಇದು ಬಂಡವಾಳಶಾಹಿ ವ್ಯವಸ್ಥೆಯ ವ್ಯಾಪಾರಿ ಗುಣವಷ್ಟೇ ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನ ಬಳಿಯ ಜವಳಿ ನಗರವೆಂದೇ ಖ್ಯಾತವಾದ ತಿರುಪುರದಲ್ಲಿ 1983ರಲ್ಲಿ ಸ್ಥಾಪನೆಯಾದ ರಾಮ್‌ರಾಜ್‌, ಇಂದು ಭಾರತದಲ್ಲಿ ಮನೆಮಾತಾಗಿರುವ ಬ್ರಾಂಡ್‌ಗಳಲ್ಲಿ ಒಂದಾಗಿದೆ. ದೋತಿ, ಅಂಗಿಗಳು, ಒಳ ಉಡುಪುಗಳು ಇತ್ಯಾದಿ ಉತ್ಪನ್ನಗಳಿಗೆ ರಾಮ್‌ರಾಜ್‌ ಅಚ್ಚುಮೆಚ್ಚಾಗಿದೆ. ಇಂದು ನೀಡಿರುವ ಜಾಹೀರಾತಿನಲ್ಲಿ ಗಾಂಧೀಜಿಯವರ ‘ಪಂಚೆ ಪ್ರೀತಿ’ಯನ್ನು ಸ್ಮರಿಸಲಾಗಿದೆ.

ಜಾಹೀರಾತಿನಲ್ಲಿ ಇರುವುದೇನು?

“ಕಳೆದ 100 ವರ್ಷಗಳ ಹಿಂದೆ ಇದೇ ದಿನದಂದು ತಮಿಳುನಾಡಿನ ಮಧುರೈ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಪಂಚೆ ಮಾತ್ರವೇ ಇನ್ನು ತನ್ನ ಉಡುಗೆಯೆಂದು ನಿರ್ಧರಿಸಿದ, ಮಾನವೀಯತೆ ತುಂಬಿದ ಮಹಾನ್‌ ವ್ಯಕ್ತಿ ಮಹಾತ್ಮಾ ಗಾಂಧೀಜಿಯರಿಗೆ ರಾಮ್‌ರಾಜ್‌ನ ಹೆಮ್ಮೆಯ ಸೆಲ್ಯೂಟ್‌”

ನನ್ನ ಜೀವನದ ಹಾದಿಯಲ್ಲಿ ನಾನು ತೆಗೆದುಕೊಂಡ ಎಲ್ಲಾ ಬದಲಾವಣೆಗಳೂ ಮುಖ್ಯವಾದ ಘಟನೆಳಿಂದಲೇ ನಡೆದಿವೆ. ಈ ನಿರ್ಣಯಗಳು ಆಳವಾದ ಆಲೋಚನೆಯ ನಂತರ ತೆಗೆದುಕೊಂಡವುಗಳು. ಆದುದರಿಂದ ನಾನು ಬೇಸರಗೊಳ್ಳ ಬೇಕಾದುದೇನೂ ಇಲ್ಲ. ನನ್ನಿಂದ ಮಾಡಲು ಸಾಧ್ಯವಾದ ಒಂದೇ ಒಂದು ಸಹಾಯ ನಾನು ತೆಗೆದುಕೊಂಡ ಈ ನಿರ್ಧಾರವೇ. ಮಧುರೈಯಲ್ಲಿ ನನ್ನ ಉಡುಪಿನಲ್ಲಿ ನಾನು ತೆಗೆದುಕೊಂಡ ಈ ಬದಲಾವಣೆಯ ಪರಿಣಾಮವಾಗಿ ನಂತರ ಪಂಚೆ ನನ್ನ ಗುರುತಾಗಿಯೇ ಪರಿಣಮಿಸಿತು.

– ಗಾಂಧೀಜಿ

‘ಪಂಚೆ ನನ್ನ ಗುರುತು’ ಎಂದು ನೀವು ಹೇಳಿದ ನುಡಿಯನ್ನೇ ವೇದವಾಕ್ಯದಂತೆ ಅನುಸರಿಸಿ, 40 ವರ್ಷಗಳಿಂದಲೂ ಪಂಚೆಯನ್ನು ಭಾರತದ ಗುರುತನ್ನಾಗಿಸಿದ್ದು ಮಾತ್ರವಲ್ಲದೆ, ಸಾವಿರಾರು ನೇಕಾರರ ಜೀವನಾಧಾರವನ್ನೂ ಉನ್ನತಮಟ್ಟಕ್ಕೇರಿಸಿದ, ‘ರಾಮ್‌ರಾಜ್‌’ ಎನ್ನುವ ಹೆಮ್ಮೆಯನ್ನು ನಿಮ್ಮ ಪಾದಕಮಲಗಳಿಗೆ ಅರ್ಪಿಸುತ್ತೇವೆ.

– ಇದು ‘ಪ್ರಜಾವಾಣಿ’ಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಸಾರಾಂಶ.

ಜನರ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತಿನ ಪೋಟೋ ಹಂಚಿಕೊಂಡು, “ಪ್ರಜಾವಾಣಿಯಲ್ಲಿ ಪ್ರಕಟವಾದ ಈ ಜಾಹೀರಾತು
ಯಾಕೋ ನನಗಿಷ್ಟವಾಯಿತು
” ಎಂದು ಚಿಂತಕ, ಕಲಾವಿದ ಗಿರಿಧರ್‌ ಕಾರ್ಕಳ ಅವರು ತಮ್ಮ ಎಫ್‌.ಬಿ. ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನನಗೂ ಖಷಿಯಾಯಿತು ಗಿರಿಧರ್. ಅದರೇ ಸಲ್ಪ ಭಯವೂ ಆಯಿತು, ಎಲ್ಲದರೂ ಗಡ್ಡಪ್ಪನ ಪೋಟೋ ಇರಬಹುದೋ ಎಂದು, ಆದರೆ ಇರಲಿಲ್ಲ ಬಚಾವ್’ ಎಂದು ಉದ್ಯಾವರ ನಾಗೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

“ಎಲ್ಲಿ ಸ್ವಲ್ಪ ಸುಳ್ಳು ಕೂಡಾ ಇದೆ . ಅದು 100% ಖಾದಿ ಅಲ್ವಾ? ರಾಮ್‌ರಾಜ್ ಆ ಬಗೆಯದ್ದೇ?” ಎಂದು ವ್ಯಂಗ್ಯಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಪ್ರತಿಕ್ರಿಯಿಸಿದ್ದು, “ಪಂಚೆ ಎಂದಷ್ಟೇ ಉಲ್ಲೇಖಿಸಿರೋದ್ರಿಂದ ನಾವೂ ಪಂಚೆಯ ಕುರಿತೇ ಪಂಚಾತಿಕೆ ಮಾಡೋಣ ಅಲ್ವಾ?” ಎಂದು ಗಿರಿಧರ್‌ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರ ಸಂತತಿ ಹೆಚ್ಚಾಗುತ್ತಿರುವ ಈ ದಿನಮಾನಗಳಲ್ಲಿ ಗಾಂಧೀಜಿಯವರನ್ನು ಅರ್ಥ ಮಾಡಿಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದ್ದಾರೆ. ಹೀಗಾಗಿ ರಾಮ್‌ರಾಮ್‌ ಜಾಹೀರಾತು ದುರಿತ ಕಾಲದ ಹೊಸ ಭರವಸೆ ಎಂಬುದು ಅನೇಕರ ಮನದಾಳ.

ಜಾಹೀರಾತಿನ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಬಂಡವಾಳಶಾಹಿ ಗುಣ ಅದು. ಚಾಲ್ತಿಯಲ್ಲಿರುವ ಎಲ್ಲ ಸಾಂಕೇತಿಕ ಭಾಷೆಗಳನ್ನು, ಸಂಕೇತಗಳನ್ನು ಮತ್ತು ರೂಪಕಗಳನ್ನು ತನ್ನದಾಗಿಸಿಕೊಳ್ಳುತ್ತಾ ವಿಸ್ತರಿಸಿಕೊಳ್ಳುವುದು ಬಂಡವಾಳದ ಲಕ್ಷಣ. ರಾಮರಾಜ್ ಅದನ್ನೇ ಮಾಡಿದೆ ನಾಳೆ ಅದಾನಿ ಅಂಬಾನಿ ಸಹ ಇದನ್ನೇ ಅನುಕರಿಸುತ್ತಾರೆ” ಎಂದು ಚಿಂತಕ ನಾ.ದಿವಾಕರ್‌ ಅಭಿಪ್ರಾಯ ತಾಳಿದ್ದಾರೆ.

ಲೈಂಗಿಕ ರೋಗಗಳ ತಜ್ಞರಾದ ನಡಹಳ್ಳಿ ವಸಂತ್‌ ಪ್ರತಿಕ್ರಿಯಿಸಿದ್ದು, “ವಿಪರ್ಯಾಸವೆಂದರೆ ಗಾಂಧೀಜಿಯೂ ಕಾರ್ಪೋರೇಟ್‌ ಆಸ್ತಿಯಾಗುತ್ತಿದ್ದಾರೆ. ಕೈಮಗ್ಗವನ್ನು ಸ್ವಾಭಿಮಾನದ ಆರ್ಥಿಕ ಸ್ವಾವಲಂಬನೆಯ ಗುರುತಾಗಿ ಪ್ರಾರಂಭಿಸಿದ್ದರು ಗಾಂಧೀಜಿ. ಇವರ ಹೆಸರನ್ನು ಯಂತ್ರಗಳಿಂದ ತಯಾರಿಸುವ ಕಾರ್ಪೋರೇಟ್‌ಗಳು ಬಳಸುತ್ತಿದ್ದಾರೆ. ಎಲ್ಲರೂ ದುರಪಯೋಗ ಪಡಿಸಿಕೊಂಡಮೇಲೂ ಗಾಂಧಿ ಎನ್ನುವ ಹೆಸರು ಪರಿಶುದ್ಧವಾಗಿಯೇ ಉಳಿಯುತ್ತದೆ’ ಎಂದಿದ್ದಾರೆ.

ಒಟ್ಟಾರೆ ಜಾಹೀರಾತಿಯ ಸಂದೇಶ ತಾತ್ವಿಕವಾಗಿ ಒಳ್ಳೆಯದಿದ್ದರೂ ವ್ಯಾಪಾರಿ ಮನೋಭಾವದ ಆಯಾಮಗಳನ್ನು ಅಲ್ಲಗಳೆಯುವಂತಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯಲ್ಲಿ ಕಾರ್ಪೊರೇಟ್‌ ವ್ಯವಸ್ಥೆಯನ್ನು ಗಾಂಧಿ ಒಪ್ಪುವುದಿಲ್ಲ ಎನ್ನುವವರ ವಾದದಲ್ಲಿ ಉರುಳಿದೆ.


ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...