Homeಮುಖಪುಟರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

‘ಗಾಂಧೀಜಿಯವರು ಪಂಚೆ ಮಾತ್ರವೇ ತನ್ನ ಉಡುಗೆಯೆಂದು ನಿರ್ಧರಿಸಿ ನೂರು ವರ್ಷವಾಯಿತು’ ಎಂದು ರಾಮ್‌ರಾಜ್‌ ಸಂಸ್ಥೆ ನೀಡಿರುವ ಜಾಹೀರಾತು ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

- Advertisement -
- Advertisement -

‘ಪಂಚೆ ಮಾತ್ರವೇ ತನ್ನ ಉಡುಗೆಯೆಂದು ಗಾಂಧೀಜಿಯವರು ಘೋಷಿಸಿ ನೂರು ವರ್ಷಗಳಾಯಿತು’ ಎಂದು ರಾಮ್‌ರಾಜ್‌ ಕಾಟನ್‌ ಸಂಸ್ಥೆ ನೀಡಿರುವ ಜಾಹೀರಾತು (ಸೆ.22, ಬುಧವಾರ) ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

‘ಪ್ರಜಾವಾಣಿ’ ದಿನಪತ್ರಿಕೆಯ ಮುಖಮುಖಪುಟದಲ್ಲಿ ಪ್ರಕಟವಾಗಿರುವ ಜಾಹೀರಾತನ್ನುಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕ ಓದುಗರು, ಜಾಹೀರಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಅನೇಕರು ಇದು ಬಂಡವಾಳಶಾಹಿ ವ್ಯವಸ್ಥೆಯ ವ್ಯಾಪಾರಿ ಗುಣವಷ್ಟೇ ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನ ಬಳಿಯ ಜವಳಿ ನಗರವೆಂದೇ ಖ್ಯಾತವಾದ ತಿರುಪುರದಲ್ಲಿ 1983ರಲ್ಲಿ ಸ್ಥಾಪನೆಯಾದ ರಾಮ್‌ರಾಜ್‌, ಇಂದು ಭಾರತದಲ್ಲಿ ಮನೆಮಾತಾಗಿರುವ ಬ್ರಾಂಡ್‌ಗಳಲ್ಲಿ ಒಂದಾಗಿದೆ. ದೋತಿ, ಅಂಗಿಗಳು, ಒಳ ಉಡುಪುಗಳು ಇತ್ಯಾದಿ ಉತ್ಪನ್ನಗಳಿಗೆ ರಾಮ್‌ರಾಜ್‌ ಅಚ್ಚುಮೆಚ್ಚಾಗಿದೆ. ಇಂದು ನೀಡಿರುವ ಜಾಹೀರಾತಿನಲ್ಲಿ ಗಾಂಧೀಜಿಯವರ ‘ಪಂಚೆ ಪ್ರೀತಿ’ಯನ್ನು ಸ್ಮರಿಸಲಾಗಿದೆ.

ಜಾಹೀರಾತಿನಲ್ಲಿ ಇರುವುದೇನು?

“ಕಳೆದ 100 ವರ್ಷಗಳ ಹಿಂದೆ ಇದೇ ದಿನದಂದು ತಮಿಳುನಾಡಿನ ಮಧುರೈ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಪಂಚೆ ಮಾತ್ರವೇ ಇನ್ನು ತನ್ನ ಉಡುಗೆಯೆಂದು ನಿರ್ಧರಿಸಿದ, ಮಾನವೀಯತೆ ತುಂಬಿದ ಮಹಾನ್‌ ವ್ಯಕ್ತಿ ಮಹಾತ್ಮಾ ಗಾಂಧೀಜಿಯರಿಗೆ ರಾಮ್‌ರಾಜ್‌ನ ಹೆಮ್ಮೆಯ ಸೆಲ್ಯೂಟ್‌”

ನನ್ನ ಜೀವನದ ಹಾದಿಯಲ್ಲಿ ನಾನು ತೆಗೆದುಕೊಂಡ ಎಲ್ಲಾ ಬದಲಾವಣೆಗಳೂ ಮುಖ್ಯವಾದ ಘಟನೆಳಿಂದಲೇ ನಡೆದಿವೆ. ಈ ನಿರ್ಣಯಗಳು ಆಳವಾದ ಆಲೋಚನೆಯ ನಂತರ ತೆಗೆದುಕೊಂಡವುಗಳು. ಆದುದರಿಂದ ನಾನು ಬೇಸರಗೊಳ್ಳ ಬೇಕಾದುದೇನೂ ಇಲ್ಲ. ನನ್ನಿಂದ ಮಾಡಲು ಸಾಧ್ಯವಾದ ಒಂದೇ ಒಂದು ಸಹಾಯ ನಾನು ತೆಗೆದುಕೊಂಡ ಈ ನಿರ್ಧಾರವೇ. ಮಧುರೈಯಲ್ಲಿ ನನ್ನ ಉಡುಪಿನಲ್ಲಿ ನಾನು ತೆಗೆದುಕೊಂಡ ಈ ಬದಲಾವಣೆಯ ಪರಿಣಾಮವಾಗಿ ನಂತರ ಪಂಚೆ ನನ್ನ ಗುರುತಾಗಿಯೇ ಪರಿಣಮಿಸಿತು.

– ಗಾಂಧೀಜಿ

‘ಪಂಚೆ ನನ್ನ ಗುರುತು’ ಎಂದು ನೀವು ಹೇಳಿದ ನುಡಿಯನ್ನೇ ವೇದವಾಕ್ಯದಂತೆ ಅನುಸರಿಸಿ, 40 ವರ್ಷಗಳಿಂದಲೂ ಪಂಚೆಯನ್ನು ಭಾರತದ ಗುರುತನ್ನಾಗಿಸಿದ್ದು ಮಾತ್ರವಲ್ಲದೆ, ಸಾವಿರಾರು ನೇಕಾರರ ಜೀವನಾಧಾರವನ್ನೂ ಉನ್ನತಮಟ್ಟಕ್ಕೇರಿಸಿದ, ‘ರಾಮ್‌ರಾಜ್‌’ ಎನ್ನುವ ಹೆಮ್ಮೆಯನ್ನು ನಿಮ್ಮ ಪಾದಕಮಲಗಳಿಗೆ ಅರ್ಪಿಸುತ್ತೇವೆ.

– ಇದು ‘ಪ್ರಜಾವಾಣಿ’ಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಸಾರಾಂಶ.

ಜನರ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತಿನ ಪೋಟೋ ಹಂಚಿಕೊಂಡು, “ಪ್ರಜಾವಾಣಿಯಲ್ಲಿ ಪ್ರಕಟವಾದ ಈ ಜಾಹೀರಾತು
ಯಾಕೋ ನನಗಿಷ್ಟವಾಯಿತು
” ಎಂದು ಚಿಂತಕ, ಕಲಾವಿದ ಗಿರಿಧರ್‌ ಕಾರ್ಕಳ ಅವರು ತಮ್ಮ ಎಫ್‌.ಬಿ. ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನನಗೂ ಖಷಿಯಾಯಿತು ಗಿರಿಧರ್. ಅದರೇ ಸಲ್ಪ ಭಯವೂ ಆಯಿತು, ಎಲ್ಲದರೂ ಗಡ್ಡಪ್ಪನ ಪೋಟೋ ಇರಬಹುದೋ ಎಂದು, ಆದರೆ ಇರಲಿಲ್ಲ ಬಚಾವ್’ ಎಂದು ಉದ್ಯಾವರ ನಾಗೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

“ಎಲ್ಲಿ ಸ್ವಲ್ಪ ಸುಳ್ಳು ಕೂಡಾ ಇದೆ . ಅದು 100% ಖಾದಿ ಅಲ್ವಾ? ರಾಮ್‌ರಾಜ್ ಆ ಬಗೆಯದ್ದೇ?” ಎಂದು ವ್ಯಂಗ್ಯಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಪ್ರತಿಕ್ರಿಯಿಸಿದ್ದು, “ಪಂಚೆ ಎಂದಷ್ಟೇ ಉಲ್ಲೇಖಿಸಿರೋದ್ರಿಂದ ನಾವೂ ಪಂಚೆಯ ಕುರಿತೇ ಪಂಚಾತಿಕೆ ಮಾಡೋಣ ಅಲ್ವಾ?” ಎಂದು ಗಿರಿಧರ್‌ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರ ಸಂತತಿ ಹೆಚ್ಚಾಗುತ್ತಿರುವ ಈ ದಿನಮಾನಗಳಲ್ಲಿ ಗಾಂಧೀಜಿಯವರನ್ನು ಅರ್ಥ ಮಾಡಿಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದ್ದಾರೆ. ಹೀಗಾಗಿ ರಾಮ್‌ರಾಮ್‌ ಜಾಹೀರಾತು ದುರಿತ ಕಾಲದ ಹೊಸ ಭರವಸೆ ಎಂಬುದು ಅನೇಕರ ಮನದಾಳ.

ಜಾಹೀರಾತಿನ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಬಂಡವಾಳಶಾಹಿ ಗುಣ ಅದು. ಚಾಲ್ತಿಯಲ್ಲಿರುವ ಎಲ್ಲ ಸಾಂಕೇತಿಕ ಭಾಷೆಗಳನ್ನು, ಸಂಕೇತಗಳನ್ನು ಮತ್ತು ರೂಪಕಗಳನ್ನು ತನ್ನದಾಗಿಸಿಕೊಳ್ಳುತ್ತಾ ವಿಸ್ತರಿಸಿಕೊಳ್ಳುವುದು ಬಂಡವಾಳದ ಲಕ್ಷಣ. ರಾಮರಾಜ್ ಅದನ್ನೇ ಮಾಡಿದೆ ನಾಳೆ ಅದಾನಿ ಅಂಬಾನಿ ಸಹ ಇದನ್ನೇ ಅನುಕರಿಸುತ್ತಾರೆ” ಎಂದು ಚಿಂತಕ ನಾ.ದಿವಾಕರ್‌ ಅಭಿಪ್ರಾಯ ತಾಳಿದ್ದಾರೆ.

ಲೈಂಗಿಕ ರೋಗಗಳ ತಜ್ಞರಾದ ನಡಹಳ್ಳಿ ವಸಂತ್‌ ಪ್ರತಿಕ್ರಿಯಿಸಿದ್ದು, “ವಿಪರ್ಯಾಸವೆಂದರೆ ಗಾಂಧೀಜಿಯೂ ಕಾರ್ಪೋರೇಟ್‌ ಆಸ್ತಿಯಾಗುತ್ತಿದ್ದಾರೆ. ಕೈಮಗ್ಗವನ್ನು ಸ್ವಾಭಿಮಾನದ ಆರ್ಥಿಕ ಸ್ವಾವಲಂಬನೆಯ ಗುರುತಾಗಿ ಪ್ರಾರಂಭಿಸಿದ್ದರು ಗಾಂಧೀಜಿ. ಇವರ ಹೆಸರನ್ನು ಯಂತ್ರಗಳಿಂದ ತಯಾರಿಸುವ ಕಾರ್ಪೋರೇಟ್‌ಗಳು ಬಳಸುತ್ತಿದ್ದಾರೆ. ಎಲ್ಲರೂ ದುರಪಯೋಗ ಪಡಿಸಿಕೊಂಡಮೇಲೂ ಗಾಂಧಿ ಎನ್ನುವ ಹೆಸರು ಪರಿಶುದ್ಧವಾಗಿಯೇ ಉಳಿಯುತ್ತದೆ’ ಎಂದಿದ್ದಾರೆ.

ಒಟ್ಟಾರೆ ಜಾಹೀರಾತಿಯ ಸಂದೇಶ ತಾತ್ವಿಕವಾಗಿ ಒಳ್ಳೆಯದಿದ್ದರೂ ವ್ಯಾಪಾರಿ ಮನೋಭಾವದ ಆಯಾಮಗಳನ್ನು ಅಲ್ಲಗಳೆಯುವಂತಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯಲ್ಲಿ ಕಾರ್ಪೊರೇಟ್‌ ವ್ಯವಸ್ಥೆಯನ್ನು ಗಾಂಧಿ ಒಪ್ಪುವುದಿಲ್ಲ ಎನ್ನುವವರ ವಾದದಲ್ಲಿ ಉರುಳಿದೆ.


ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...