Homeಮುಖಪುಟರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

‘ಗಾಂಧೀಜಿಯವರು ಪಂಚೆ ಮಾತ್ರವೇ ತನ್ನ ಉಡುಗೆಯೆಂದು ನಿರ್ಧರಿಸಿ ನೂರು ವರ್ಷವಾಯಿತು’ ಎಂದು ರಾಮ್‌ರಾಜ್‌ ಸಂಸ್ಥೆ ನೀಡಿರುವ ಜಾಹೀರಾತು ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

- Advertisement -
- Advertisement -

‘ಪಂಚೆ ಮಾತ್ರವೇ ತನ್ನ ಉಡುಗೆಯೆಂದು ಗಾಂಧೀಜಿಯವರು ಘೋಷಿಸಿ ನೂರು ವರ್ಷಗಳಾಯಿತು’ ಎಂದು ರಾಮ್‌ರಾಜ್‌ ಕಾಟನ್‌ ಸಂಸ್ಥೆ ನೀಡಿರುವ ಜಾಹೀರಾತು (ಸೆ.22, ಬುಧವಾರ) ಮೆಚ್ಚುಗೆ, ಟೀಕೆ ಹಾಗೂ ವಿಮರ್ಶೆಗೆ ಒಳಗಾಗಿದೆ.

‘ಪ್ರಜಾವಾಣಿ’ ದಿನಪತ್ರಿಕೆಯ ಮುಖಮುಖಪುಟದಲ್ಲಿ ಪ್ರಕಟವಾಗಿರುವ ಜಾಹೀರಾತನ್ನುಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕ ಓದುಗರು, ಜಾಹೀರಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಅನೇಕರು ಇದು ಬಂಡವಾಳಶಾಹಿ ವ್ಯವಸ್ಥೆಯ ವ್ಯಾಪಾರಿ ಗುಣವಷ್ಟೇ ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನ ಬಳಿಯ ಜವಳಿ ನಗರವೆಂದೇ ಖ್ಯಾತವಾದ ತಿರುಪುರದಲ್ಲಿ 1983ರಲ್ಲಿ ಸ್ಥಾಪನೆಯಾದ ರಾಮ್‌ರಾಜ್‌, ಇಂದು ಭಾರತದಲ್ಲಿ ಮನೆಮಾತಾಗಿರುವ ಬ್ರಾಂಡ್‌ಗಳಲ್ಲಿ ಒಂದಾಗಿದೆ. ದೋತಿ, ಅಂಗಿಗಳು, ಒಳ ಉಡುಪುಗಳು ಇತ್ಯಾದಿ ಉತ್ಪನ್ನಗಳಿಗೆ ರಾಮ್‌ರಾಜ್‌ ಅಚ್ಚುಮೆಚ್ಚಾಗಿದೆ. ಇಂದು ನೀಡಿರುವ ಜಾಹೀರಾತಿನಲ್ಲಿ ಗಾಂಧೀಜಿಯವರ ‘ಪಂಚೆ ಪ್ರೀತಿ’ಯನ್ನು ಸ್ಮರಿಸಲಾಗಿದೆ.

ಜಾಹೀರಾತಿನಲ್ಲಿ ಇರುವುದೇನು?

“ಕಳೆದ 100 ವರ್ಷಗಳ ಹಿಂದೆ ಇದೇ ದಿನದಂದು ತಮಿಳುನಾಡಿನ ಮಧುರೈ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಪಂಚೆ ಮಾತ್ರವೇ ಇನ್ನು ತನ್ನ ಉಡುಗೆಯೆಂದು ನಿರ್ಧರಿಸಿದ, ಮಾನವೀಯತೆ ತುಂಬಿದ ಮಹಾನ್‌ ವ್ಯಕ್ತಿ ಮಹಾತ್ಮಾ ಗಾಂಧೀಜಿಯರಿಗೆ ರಾಮ್‌ರಾಜ್‌ನ ಹೆಮ್ಮೆಯ ಸೆಲ್ಯೂಟ್‌”

ನನ್ನ ಜೀವನದ ಹಾದಿಯಲ್ಲಿ ನಾನು ತೆಗೆದುಕೊಂಡ ಎಲ್ಲಾ ಬದಲಾವಣೆಗಳೂ ಮುಖ್ಯವಾದ ಘಟನೆಳಿಂದಲೇ ನಡೆದಿವೆ. ಈ ನಿರ್ಣಯಗಳು ಆಳವಾದ ಆಲೋಚನೆಯ ನಂತರ ತೆಗೆದುಕೊಂಡವುಗಳು. ಆದುದರಿಂದ ನಾನು ಬೇಸರಗೊಳ್ಳ ಬೇಕಾದುದೇನೂ ಇಲ್ಲ. ನನ್ನಿಂದ ಮಾಡಲು ಸಾಧ್ಯವಾದ ಒಂದೇ ಒಂದು ಸಹಾಯ ನಾನು ತೆಗೆದುಕೊಂಡ ಈ ನಿರ್ಧಾರವೇ. ಮಧುರೈಯಲ್ಲಿ ನನ್ನ ಉಡುಪಿನಲ್ಲಿ ನಾನು ತೆಗೆದುಕೊಂಡ ಈ ಬದಲಾವಣೆಯ ಪರಿಣಾಮವಾಗಿ ನಂತರ ಪಂಚೆ ನನ್ನ ಗುರುತಾಗಿಯೇ ಪರಿಣಮಿಸಿತು.

– ಗಾಂಧೀಜಿ

‘ಪಂಚೆ ನನ್ನ ಗುರುತು’ ಎಂದು ನೀವು ಹೇಳಿದ ನುಡಿಯನ್ನೇ ವೇದವಾಕ್ಯದಂತೆ ಅನುಸರಿಸಿ, 40 ವರ್ಷಗಳಿಂದಲೂ ಪಂಚೆಯನ್ನು ಭಾರತದ ಗುರುತನ್ನಾಗಿಸಿದ್ದು ಮಾತ್ರವಲ್ಲದೆ, ಸಾವಿರಾರು ನೇಕಾರರ ಜೀವನಾಧಾರವನ್ನೂ ಉನ್ನತಮಟ್ಟಕ್ಕೇರಿಸಿದ, ‘ರಾಮ್‌ರಾಜ್‌’ ಎನ್ನುವ ಹೆಮ್ಮೆಯನ್ನು ನಿಮ್ಮ ಪಾದಕಮಲಗಳಿಗೆ ಅರ್ಪಿಸುತ್ತೇವೆ.

– ಇದು ‘ಪ್ರಜಾವಾಣಿ’ಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಸಾರಾಂಶ.

ಜನರ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತಿನ ಪೋಟೋ ಹಂಚಿಕೊಂಡು, “ಪ್ರಜಾವಾಣಿಯಲ್ಲಿ ಪ್ರಕಟವಾದ ಈ ಜಾಹೀರಾತು
ಯಾಕೋ ನನಗಿಷ್ಟವಾಯಿತು
” ಎಂದು ಚಿಂತಕ, ಕಲಾವಿದ ಗಿರಿಧರ್‌ ಕಾರ್ಕಳ ಅವರು ತಮ್ಮ ಎಫ್‌.ಬಿ. ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನನಗೂ ಖಷಿಯಾಯಿತು ಗಿರಿಧರ್. ಅದರೇ ಸಲ್ಪ ಭಯವೂ ಆಯಿತು, ಎಲ್ಲದರೂ ಗಡ್ಡಪ್ಪನ ಪೋಟೋ ಇರಬಹುದೋ ಎಂದು, ಆದರೆ ಇರಲಿಲ್ಲ ಬಚಾವ್’ ಎಂದು ಉದ್ಯಾವರ ನಾಗೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

“ಎಲ್ಲಿ ಸ್ವಲ್ಪ ಸುಳ್ಳು ಕೂಡಾ ಇದೆ . ಅದು 100% ಖಾದಿ ಅಲ್ವಾ? ರಾಮ್‌ರಾಜ್ ಆ ಬಗೆಯದ್ದೇ?” ಎಂದು ವ್ಯಂಗ್ಯಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಪ್ರತಿಕ್ರಿಯಿಸಿದ್ದು, “ಪಂಚೆ ಎಂದಷ್ಟೇ ಉಲ್ಲೇಖಿಸಿರೋದ್ರಿಂದ ನಾವೂ ಪಂಚೆಯ ಕುರಿತೇ ಪಂಚಾತಿಕೆ ಮಾಡೋಣ ಅಲ್ವಾ?” ಎಂದು ಗಿರಿಧರ್‌ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರ ಸಂತತಿ ಹೆಚ್ಚಾಗುತ್ತಿರುವ ಈ ದಿನಮಾನಗಳಲ್ಲಿ ಗಾಂಧೀಜಿಯವರನ್ನು ಅರ್ಥ ಮಾಡಿಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದ್ದಾರೆ. ಹೀಗಾಗಿ ರಾಮ್‌ರಾಮ್‌ ಜಾಹೀರಾತು ದುರಿತ ಕಾಲದ ಹೊಸ ಭರವಸೆ ಎಂಬುದು ಅನೇಕರ ಮನದಾಳ.

ಜಾಹೀರಾತಿನ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಬಂಡವಾಳಶಾಹಿ ಗುಣ ಅದು. ಚಾಲ್ತಿಯಲ್ಲಿರುವ ಎಲ್ಲ ಸಾಂಕೇತಿಕ ಭಾಷೆಗಳನ್ನು, ಸಂಕೇತಗಳನ್ನು ಮತ್ತು ರೂಪಕಗಳನ್ನು ತನ್ನದಾಗಿಸಿಕೊಳ್ಳುತ್ತಾ ವಿಸ್ತರಿಸಿಕೊಳ್ಳುವುದು ಬಂಡವಾಳದ ಲಕ್ಷಣ. ರಾಮರಾಜ್ ಅದನ್ನೇ ಮಾಡಿದೆ ನಾಳೆ ಅದಾನಿ ಅಂಬಾನಿ ಸಹ ಇದನ್ನೇ ಅನುಕರಿಸುತ್ತಾರೆ” ಎಂದು ಚಿಂತಕ ನಾ.ದಿವಾಕರ್‌ ಅಭಿಪ್ರಾಯ ತಾಳಿದ್ದಾರೆ.

ಲೈಂಗಿಕ ರೋಗಗಳ ತಜ್ಞರಾದ ನಡಹಳ್ಳಿ ವಸಂತ್‌ ಪ್ರತಿಕ್ರಿಯಿಸಿದ್ದು, “ವಿಪರ್ಯಾಸವೆಂದರೆ ಗಾಂಧೀಜಿಯೂ ಕಾರ್ಪೋರೇಟ್‌ ಆಸ್ತಿಯಾಗುತ್ತಿದ್ದಾರೆ. ಕೈಮಗ್ಗವನ್ನು ಸ್ವಾಭಿಮಾನದ ಆರ್ಥಿಕ ಸ್ವಾವಲಂಬನೆಯ ಗುರುತಾಗಿ ಪ್ರಾರಂಭಿಸಿದ್ದರು ಗಾಂಧೀಜಿ. ಇವರ ಹೆಸರನ್ನು ಯಂತ್ರಗಳಿಂದ ತಯಾರಿಸುವ ಕಾರ್ಪೋರೇಟ್‌ಗಳು ಬಳಸುತ್ತಿದ್ದಾರೆ. ಎಲ್ಲರೂ ದುರಪಯೋಗ ಪಡಿಸಿಕೊಂಡಮೇಲೂ ಗಾಂಧಿ ಎನ್ನುವ ಹೆಸರು ಪರಿಶುದ್ಧವಾಗಿಯೇ ಉಳಿಯುತ್ತದೆ’ ಎಂದಿದ್ದಾರೆ.

ಒಟ್ಟಾರೆ ಜಾಹೀರಾತಿಯ ಸಂದೇಶ ತಾತ್ವಿಕವಾಗಿ ಒಳ್ಳೆಯದಿದ್ದರೂ ವ್ಯಾಪಾರಿ ಮನೋಭಾವದ ಆಯಾಮಗಳನ್ನು ಅಲ್ಲಗಳೆಯುವಂತಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯಲ್ಲಿ ಕಾರ್ಪೊರೇಟ್‌ ವ್ಯವಸ್ಥೆಯನ್ನು ಗಾಂಧಿ ಒಪ್ಪುವುದಿಲ್ಲ ಎನ್ನುವವರ ವಾದದಲ್ಲಿ ಉರುಳಿದೆ.


ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...