Homeಕರ್ನಾಟಕಅಘೋಷಿತ ತುರ್ತುಪರಿಸ್ಥಿತಿಯಲ್ಲಿ "ಗಾಂಧಿ ಭಾರತ" ಅಗತ್ಯ

ಅಘೋಷಿತ ತುರ್ತುಪರಿಸ್ಥಿತಿಯಲ್ಲಿ “ಗಾಂಧಿ ಭಾರತ” ಅಗತ್ಯ

- Advertisement -
- Advertisement -

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ “ಗಾಂಧಿ ಭಾರತ” ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌

1924 ಡಿಸೆಂಬರ್ 26 ಮಹಾತ್ಮಗಾಂಧಿಯವರು ಅಧ್ಯಕ್ಷರಾಗಿದ್ದ ಸಮಯದಲ್ಲಿ, ರಾಷ್ಟ್ರೀಯ ಅಧಿವೇಶನವನ್ನು ಬೆಳಗಾವಿಯಲ್ಲಿ ನೆಡೆಸಿದ್ದಕ್ಕೆ ಇಂದಿಗೆ ನೂರು ವರ್ಷ ಪೂರೈಸುತ್ತಿವೆ. ಇದೊಂದು ಅಭೂತಪೂರ್ವ ಭಾಗ್ಯ ಕರ್ನಾಟಕದಾಗಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲಿಯವರೆಗೂ ಮುಂಬೈ -ಕಲ್ಕತ್ತಾ -ದೆಹಲಿ ಪ್ರಾಂತ್ಯಗಳಲ್ಲಿ ಬಹಳ ದಕ್ಷತೆಯಿಂದ ರಾಜಕಾರಣದಲ್ಲಿ ಕಾಂಗ್ರೆಸ್ ನೆಲೆಯೂರಿದ್ದರೂ, ಅದು ದೇಶಾದ್ಯಂತ ವ್ಯಾಪಿಸಲು ಈ ಬೆಳಗಾವಿ ಅಧಿವೇಶನ ಹೊಸ ದಿಕ್ಸೂಚಿಯನ್ನು ನೀಡಿತು ಎಂದರೆ ತಪ್ಪಾಗಲಾರದು.

ಮಹಾತ್ಮ ಗಾಂಧಿಯವರು ಕೇವಲ ರಾಜಕಾರಣಿಯಾಗಿರಲಿಲ್ಲ, ಅವರೊಬ್ಬ ಸಮಾಜ ಸುಧಾರಕರೂ ಆಗಿದ್ದರು.‌ ಹಾಗಾಗಿ ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕಾಂಗ್ರೆಸ್ಸನ್ನು ಕೇವಲ ರಾಜಕೀಯ ಪಕ್ಷವಾಗಿ ನೋಡದೆ, ಸಮಾಜ ಸುಧಾರಣೆಯ ಅಂಶಗಳನ್ನು ಅಳವಡಿಸಿದರು. ದೇಶದ ಪ್ರತಿ ಮನೆಮನೆಗೂ ಕಾಂಗ್ರೆಸ್ ಪಕ್ಷವನ್ನು ತಲುಪಿಸುವಲ್ಲಿ ಈ ಅಧಿವೇಶನ ಬಹುಮುಖ್ಯ ಪಾತ್ರವಹಿಸಿತು. ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿಗೂ ಕಾಂಗ್ರೆಸ್  ಕಾರ್ಯಕರ್ತರು ತಮ್ಮನ್ನು ತಾವು ಸ್ವಾತಂತ್ರ್ಯ ಚಳುವಳಿಗೆ ಸಮರ್ಪಿಸಿಕೊಂಡರು.

ಇಡೀ ಅಖಂಡ ಭಾರತದ ಉದ್ದಗಲಕ್ಕೂ ಪ್ರವಾಸ ಮಾಡಿದ ಗಾಂಧಿಯವರು, 18 ಬಾರಿ ಪ್ರವಾಸ ಮಾಡಿ, 122 ದಿನ ಕರ್ನಾಟಕದ ನೆಲದಲ್ಲಿ ಓಡಾಡಿದರು. ದೇಶದ ವಿವಿಧ ಜಾತಿ- ಧರ್ಮ- ಸಂಸ್ಕೃತಿ ಹಾಗೂ ಜನರ ಸಾಮಾಜಿಕ ಜೀವನವನ್ನು ಅಭ್ಯಾಸ ಮಾಡಿದ ಅವರು, “ಸ್ವಾತಂತ್ರ್ಯ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಭಾಷಾವಾರು ಪ್ರಾಂತ್ಯಗಳಾಗಬೇಕೆಂದು” ಘೋಷಣೆ ಮಾಡುವುದರ ಮೂಲಕ‌ ಅಂದೇ ಬಹುತ್ವ ಭಾರತಕ್ಕೆ ನಾಂದಿ ಹಾಡಿದರು. ಇದಲ್ಲದೇ ಅಸ್ಪೃಶ್ಯತೆ ನಿವಾರಣೆ, ಹಿಂದೂ- ಮುಸ್ಲಿಂ ಭಾತೃತ್ವ, ಸ್ವದೇಶಿ ಖಾದಿ ಬಳಕೆ ಹೀಗೆ ಹತ್ತು ಹಲವಾರು ನಿರ್ಣಯಗಳನ್ನು ಜಾರಿಗೆ ತಂದರು.

ಇಂದು ಕಾಂಗ್ರೆಸ್ಸಿನ ರಾಷ್ರ್ಟೀಯ ಅಧಿವೇಶನ ನೂರು ವರ್ಷ ಹಿಂದೆ ನೆಡೆದ ಸ್ಥಳದಲ್ಲಿ ನೆಡೆಯುತ್ತಿರುವುದು ಕೂಡ ಒಂದು ಐತಿಹಾಸಿಕ.‌ ಇಂದು ರಾಷ್ಟ್ರೀಯ ಕಾಂಗ್ರೇಸ್  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ  ಈ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಿರುವುದು ಕೂಡ ಮತ್ತೊಂದು ಮೈಲಿಗಲ್ಲು. ಕಾರಣ ನೂರು ವರ್ಷದ ಹಿಂದೆ ನೆಡೆದ ಸಭೆಯಲ್ಲಿ ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಂದಿನ ಸರ್ವಸಮ್ಮತದ ನಿರ್ಧಾರವಾಗಿತ್ತು.‌ ನೂರನೇ ವರ್ಷದ ಈ ದಿನದ ಅಧಿವೇಶನದಲ್ಲಿ ದಲಿತರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದದ್ದು ಕೂಡ ಅಭೂತಪೂರ್ವ ಕ್ಷಣವೆಂದರೆ ಅತಿಶಯೋಕ್ತಿ ಅಲ್ಲ.

ಹಾಗೆ ದೇಶದ ಆದರ್ಶ ಮಹಿಳೆ ಸೋನಿಯಾಗಾಂಧಿ , ಬಹುತ್ವ ಭಾರತದ ಭರವಸೆಯ ಜನನಾಯಕ ರಾಹುಲ್ ಗಾಂಧಿಯವರು, CWC ಸದಸ್ಯರು,ಸ್ರ್ತೀಶಕ್ತಿ ಬೆನ್ನೆಲುಬಾದ ಪ್ರಿಯಾಂಕಗಾಂಧಿ, ರಾಷ್ಟ್ರೀಯ ನಾಯಕರು, ಕರ್ನಾಟಕದ ಸೈದ್ಧಾತಿಕ ಮೇರುವ್ಯಕ್ತಿತ್ವದ ಜನನಾಯಕರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಹಾಗೂ ಎಲ್ಲಾ ಸಚಿವ ಸಂಪುಟದ ಸದಸ್ಯರು, ಶಾಸಕರು,ಸಂಸದರು, ವಿಧಾನಪರಿಷತ್ತು ರಾಜ್ಯಸಭಾ ಸದಸ್ಯರು, ರಾಷ್ಟ್ರೀಯ ಹಾಗೂ ರಾಜ್ಯ ಪಧಾಧಿಕಾರಿಗಳು, ಸೇವಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗಿಯಾದ ಎಲ್ಲರಿಗೂ ಶುಭಾಶಯಗಳು.

ಸ್ವಾತಂತ್ರ್ಯ ಭಾರತದ ನಂತರ ಈ ದೇಶಕ್ಕೆ ” ಗಾಂಧಿ ಭಾರತ” ಎಂದು ಹೆಸರಿಡಬೇಕು ಎಂದು ಸಮಾಜವಾದಿ ಲೋಹಿಯಾ ಅವರ ಅಪೇಕ್ಷೆಯಾಗಿತ್ತು. ಈ ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿಸಿ ಸ್ವತಂತ್ರ ತಂದುಕೊಟ್ಟ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಅದೆಷ್ಟು ಮುಖ್ಯವೋ, ಸ್ವಾತಂತ್ರ್ಯ ನಂತರದ ಭಾರತದ ಭವಿಷ್ಯಕ್ಕಾಗಿ ನಿರ್ಮಾಣವಾದ ಅಂಬೇಡ್ಕರ್ ನೇತೃತ್ವದ ಸಂವಿಧಾನ ಅಷ್ಟೇ ಮುಖ್ಯ. ಸ್ವಾತಂತ್ರ್ಯ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಂತೆ. ಭಾರತದ ಸಂವಿಧಾನ ಈ ದೇಶದ ಉದ್ದಗಲಕ್ಕೂ ಹರಿಯುವ ಮಹಾನದಿಯಾದರೆ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಸಂವಿಧಾನಶಿಲ್ಪಿ ಅಂಬೇಡ್ಕರ್ ಎರಡು ದಡಗಳು..

ಹೀಗಾಗಿ ಇಂದಿನ ರ್ಯಾಲಿಗೆ ” ಜೈ ಬಾಪೂ – ಜೈ ಭೀಮ್- ಜೈ ಸಂವಿಧಾನ್ ” ಹೆಸರು ಬಹಳ ಅರ್ಥಪೂರ್ಣವಾಗಿದೆ. ಮನುವಾದಿಗಳನ್ನು ನಿರ್ನಾಮ ಮಾಡಲು ಈ ಮೂರು ವಾಕ್ಯಗಳು ನಮ್ಮ ಕಾಂಗ್ರೆಸ್ಸಿನ  ಮುಂದಿನ ಘೋಷಣೆಗಳಾಗಬೇಕು.

“ಗಾಂಧಿ, ಭಾರತದ ಆತ್ಮವಾದರೆ- ಅಂಬೇಡ್ಕರ್ ದೇಶವೆಂಬ ದೇಹದಲ್ಲಿ ಹರಿದಾಡುವ ರಕ್ತ” ಇತಿಹಾಸದಲ್ಲಿ‌ ಆದ ಹಲವು ಕಹಿಘಟನೆಗಳನ್ನು ಮರೆತು, ನಮ್ಮ ಮುಂದಿನ ಭವಿಷ್ಯದ ಬಹುತ್ವಭಾರತಕ್ಕಾಗಿ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರದು.

ಒಂದು ವರ್ಷದ ” ಗಾಂಧಿ ಭಾರತ” ದ ರೂಪರೇಷೆಗಳು ವಿಭಿನ್ನವಾಗಿರಲಿ ಹಾಗೂ ಈ ಸುದಿನ ಅರ್ಥಪೂರ್ಣವಾಗಿ ಮುಂದಿನ ಭಾರತದ ನಿರ್ಮಾಣಕ್ಕೆ ಭದ್ರ ಭವಿಷ್ಯ ನಿರ್ಮಾಣ ಮಾಡುವ ಐತಿಹಾಸಿಕ ನಿರ್ಣಯಗಳು ಹೊರಹೊಮ್ಮಲಿ ಎಂದು ಆಶಿಸೋಣ.‌

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...