Homeಕರ್ನಾಟಕಅಘೋಷಿತ ತುರ್ತುಪರಿಸ್ಥಿತಿಯಲ್ಲಿ "ಗಾಂಧಿ ಭಾರತ" ಅಗತ್ಯ

ಅಘೋಷಿತ ತುರ್ತುಪರಿಸ್ಥಿತಿಯಲ್ಲಿ “ಗಾಂಧಿ ಭಾರತ” ಅಗತ್ಯ

- Advertisement -
- Advertisement -

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ “ಗಾಂಧಿ ಭಾರತ” ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌

1924 ಡಿಸೆಂಬರ್ 26 ಮಹಾತ್ಮಗಾಂಧಿಯವರು ಅಧ್ಯಕ್ಷರಾಗಿದ್ದ ಸಮಯದಲ್ಲಿ, ರಾಷ್ಟ್ರೀಯ ಅಧಿವೇಶನವನ್ನು ಬೆಳಗಾವಿಯಲ್ಲಿ ನೆಡೆಸಿದ್ದಕ್ಕೆ ಇಂದಿಗೆ ನೂರು ವರ್ಷ ಪೂರೈಸುತ್ತಿವೆ. ಇದೊಂದು ಅಭೂತಪೂರ್ವ ಭಾಗ್ಯ ಕರ್ನಾಟಕದಾಗಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲಿಯವರೆಗೂ ಮುಂಬೈ -ಕಲ್ಕತ್ತಾ -ದೆಹಲಿ ಪ್ರಾಂತ್ಯಗಳಲ್ಲಿ ಬಹಳ ದಕ್ಷತೆಯಿಂದ ರಾಜಕಾರಣದಲ್ಲಿ ಕಾಂಗ್ರೆಸ್ ನೆಲೆಯೂರಿದ್ದರೂ, ಅದು ದೇಶಾದ್ಯಂತ ವ್ಯಾಪಿಸಲು ಈ ಬೆಳಗಾವಿ ಅಧಿವೇಶನ ಹೊಸ ದಿಕ್ಸೂಚಿಯನ್ನು ನೀಡಿತು ಎಂದರೆ ತಪ್ಪಾಗಲಾರದು.

ಮಹಾತ್ಮ ಗಾಂಧಿಯವರು ಕೇವಲ ರಾಜಕಾರಣಿಯಾಗಿರಲಿಲ್ಲ, ಅವರೊಬ್ಬ ಸಮಾಜ ಸುಧಾರಕರೂ ಆಗಿದ್ದರು.‌ ಹಾಗಾಗಿ ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕಾಂಗ್ರೆಸ್ಸನ್ನು ಕೇವಲ ರಾಜಕೀಯ ಪಕ್ಷವಾಗಿ ನೋಡದೆ, ಸಮಾಜ ಸುಧಾರಣೆಯ ಅಂಶಗಳನ್ನು ಅಳವಡಿಸಿದರು. ದೇಶದ ಪ್ರತಿ ಮನೆಮನೆಗೂ ಕಾಂಗ್ರೆಸ್ ಪಕ್ಷವನ್ನು ತಲುಪಿಸುವಲ್ಲಿ ಈ ಅಧಿವೇಶನ ಬಹುಮುಖ್ಯ ಪಾತ್ರವಹಿಸಿತು. ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿಗೂ ಕಾಂಗ್ರೆಸ್  ಕಾರ್ಯಕರ್ತರು ತಮ್ಮನ್ನು ತಾವು ಸ್ವಾತಂತ್ರ್ಯ ಚಳುವಳಿಗೆ ಸಮರ್ಪಿಸಿಕೊಂಡರು.

ಇಡೀ ಅಖಂಡ ಭಾರತದ ಉದ್ದಗಲಕ್ಕೂ ಪ್ರವಾಸ ಮಾಡಿದ ಗಾಂಧಿಯವರು, 18 ಬಾರಿ ಪ್ರವಾಸ ಮಾಡಿ, 122 ದಿನ ಕರ್ನಾಟಕದ ನೆಲದಲ್ಲಿ ಓಡಾಡಿದರು. ದೇಶದ ವಿವಿಧ ಜಾತಿ- ಧರ್ಮ- ಸಂಸ್ಕೃತಿ ಹಾಗೂ ಜನರ ಸಾಮಾಜಿಕ ಜೀವನವನ್ನು ಅಭ್ಯಾಸ ಮಾಡಿದ ಅವರು, “ಸ್ವಾತಂತ್ರ್ಯ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಭಾಷಾವಾರು ಪ್ರಾಂತ್ಯಗಳಾಗಬೇಕೆಂದು” ಘೋಷಣೆ ಮಾಡುವುದರ ಮೂಲಕ‌ ಅಂದೇ ಬಹುತ್ವ ಭಾರತಕ್ಕೆ ನಾಂದಿ ಹಾಡಿದರು. ಇದಲ್ಲದೇ ಅಸ್ಪೃಶ್ಯತೆ ನಿವಾರಣೆ, ಹಿಂದೂ- ಮುಸ್ಲಿಂ ಭಾತೃತ್ವ, ಸ್ವದೇಶಿ ಖಾದಿ ಬಳಕೆ ಹೀಗೆ ಹತ್ತು ಹಲವಾರು ನಿರ್ಣಯಗಳನ್ನು ಜಾರಿಗೆ ತಂದರು.

ಇಂದು ಕಾಂಗ್ರೆಸ್ಸಿನ ರಾಷ್ರ್ಟೀಯ ಅಧಿವೇಶನ ನೂರು ವರ್ಷ ಹಿಂದೆ ನೆಡೆದ ಸ್ಥಳದಲ್ಲಿ ನೆಡೆಯುತ್ತಿರುವುದು ಕೂಡ ಒಂದು ಐತಿಹಾಸಿಕ.‌ ಇಂದು ರಾಷ್ಟ್ರೀಯ ಕಾಂಗ್ರೇಸ್  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ  ಈ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಿರುವುದು ಕೂಡ ಮತ್ತೊಂದು ಮೈಲಿಗಲ್ಲು. ಕಾರಣ ನೂರು ವರ್ಷದ ಹಿಂದೆ ನೆಡೆದ ಸಭೆಯಲ್ಲಿ ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಂದಿನ ಸರ್ವಸಮ್ಮತದ ನಿರ್ಧಾರವಾಗಿತ್ತು.‌ ನೂರನೇ ವರ್ಷದ ಈ ದಿನದ ಅಧಿವೇಶನದಲ್ಲಿ ದಲಿತರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದದ್ದು ಕೂಡ ಅಭೂತಪೂರ್ವ ಕ್ಷಣವೆಂದರೆ ಅತಿಶಯೋಕ್ತಿ ಅಲ್ಲ.

ಹಾಗೆ ದೇಶದ ಆದರ್ಶ ಮಹಿಳೆ ಸೋನಿಯಾಗಾಂಧಿ , ಬಹುತ್ವ ಭಾರತದ ಭರವಸೆಯ ಜನನಾಯಕ ರಾಹುಲ್ ಗಾಂಧಿಯವರು, CWC ಸದಸ್ಯರು,ಸ್ರ್ತೀಶಕ್ತಿ ಬೆನ್ನೆಲುಬಾದ ಪ್ರಿಯಾಂಕಗಾಂಧಿ, ರಾಷ್ಟ್ರೀಯ ನಾಯಕರು, ಕರ್ನಾಟಕದ ಸೈದ್ಧಾತಿಕ ಮೇರುವ್ಯಕ್ತಿತ್ವದ ಜನನಾಯಕರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಹಾಗೂ ಎಲ್ಲಾ ಸಚಿವ ಸಂಪುಟದ ಸದಸ್ಯರು, ಶಾಸಕರು,ಸಂಸದರು, ವಿಧಾನಪರಿಷತ್ತು ರಾಜ್ಯಸಭಾ ಸದಸ್ಯರು, ರಾಷ್ಟ್ರೀಯ ಹಾಗೂ ರಾಜ್ಯ ಪಧಾಧಿಕಾರಿಗಳು, ಸೇವಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗಿಯಾದ ಎಲ್ಲರಿಗೂ ಶುಭಾಶಯಗಳು.

ಸ್ವಾತಂತ್ರ್ಯ ಭಾರತದ ನಂತರ ಈ ದೇಶಕ್ಕೆ ” ಗಾಂಧಿ ಭಾರತ” ಎಂದು ಹೆಸರಿಡಬೇಕು ಎಂದು ಸಮಾಜವಾದಿ ಲೋಹಿಯಾ ಅವರ ಅಪೇಕ್ಷೆಯಾಗಿತ್ತು. ಈ ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿಸಿ ಸ್ವತಂತ್ರ ತಂದುಕೊಟ್ಟ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಅದೆಷ್ಟು ಮುಖ್ಯವೋ, ಸ್ವಾತಂತ್ರ್ಯ ನಂತರದ ಭಾರತದ ಭವಿಷ್ಯಕ್ಕಾಗಿ ನಿರ್ಮಾಣವಾದ ಅಂಬೇಡ್ಕರ್ ನೇತೃತ್ವದ ಸಂವಿಧಾನ ಅಷ್ಟೇ ಮುಖ್ಯ. ಸ್ವಾತಂತ್ರ್ಯ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಂತೆ. ಭಾರತದ ಸಂವಿಧಾನ ಈ ದೇಶದ ಉದ್ದಗಲಕ್ಕೂ ಹರಿಯುವ ಮಹಾನದಿಯಾದರೆ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಸಂವಿಧಾನಶಿಲ್ಪಿ ಅಂಬೇಡ್ಕರ್ ಎರಡು ದಡಗಳು..

ಹೀಗಾಗಿ ಇಂದಿನ ರ್ಯಾಲಿಗೆ ” ಜೈ ಬಾಪೂ – ಜೈ ಭೀಮ್- ಜೈ ಸಂವಿಧಾನ್ ” ಹೆಸರು ಬಹಳ ಅರ್ಥಪೂರ್ಣವಾಗಿದೆ. ಮನುವಾದಿಗಳನ್ನು ನಿರ್ನಾಮ ಮಾಡಲು ಈ ಮೂರು ವಾಕ್ಯಗಳು ನಮ್ಮ ಕಾಂಗ್ರೆಸ್ಸಿನ  ಮುಂದಿನ ಘೋಷಣೆಗಳಾಗಬೇಕು.

“ಗಾಂಧಿ, ಭಾರತದ ಆತ್ಮವಾದರೆ- ಅಂಬೇಡ್ಕರ್ ದೇಶವೆಂಬ ದೇಹದಲ್ಲಿ ಹರಿದಾಡುವ ರಕ್ತ” ಇತಿಹಾಸದಲ್ಲಿ‌ ಆದ ಹಲವು ಕಹಿಘಟನೆಗಳನ್ನು ಮರೆತು, ನಮ್ಮ ಮುಂದಿನ ಭವಿಷ್ಯದ ಬಹುತ್ವಭಾರತಕ್ಕಾಗಿ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರದು.

ಒಂದು ವರ್ಷದ ” ಗಾಂಧಿ ಭಾರತ” ದ ರೂಪರೇಷೆಗಳು ವಿಭಿನ್ನವಾಗಿರಲಿ ಹಾಗೂ ಈ ಸುದಿನ ಅರ್ಥಪೂರ್ಣವಾಗಿ ಮುಂದಿನ ಭಾರತದ ನಿರ್ಮಾಣಕ್ಕೆ ಭದ್ರ ಭವಿಷ್ಯ ನಿರ್ಮಾಣ ಮಾಡುವ ಐತಿಹಾಸಿಕ ನಿರ್ಣಯಗಳು ಹೊರಹೊಮ್ಮಲಿ ಎಂದು ಆಶಿಸೋಣ.‌

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...