Homeಕರ್ನಾಟಕಅಘೋಷಿತ ತುರ್ತುಪರಿಸ್ಥಿತಿಯಲ್ಲಿ "ಗಾಂಧಿ ಭಾರತ" ಅಗತ್ಯ

ಅಘೋಷಿತ ತುರ್ತುಪರಿಸ್ಥಿತಿಯಲ್ಲಿ “ಗಾಂಧಿ ಭಾರತ” ಅಗತ್ಯ

- Advertisement -
- Advertisement -

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ “ಗಾಂಧಿ ಭಾರತ” ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌

1924 ಡಿಸೆಂಬರ್ 26 ಮಹಾತ್ಮಗಾಂಧಿಯವರು ಅಧ್ಯಕ್ಷರಾಗಿದ್ದ ಸಮಯದಲ್ಲಿ, ರಾಷ್ಟ್ರೀಯ ಅಧಿವೇಶನವನ್ನು ಬೆಳಗಾವಿಯಲ್ಲಿ ನೆಡೆಸಿದ್ದಕ್ಕೆ ಇಂದಿಗೆ ನೂರು ವರ್ಷ ಪೂರೈಸುತ್ತಿವೆ. ಇದೊಂದು ಅಭೂತಪೂರ್ವ ಭಾಗ್ಯ ಕರ್ನಾಟಕದಾಗಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲಿಯವರೆಗೂ ಮುಂಬೈ -ಕಲ್ಕತ್ತಾ -ದೆಹಲಿ ಪ್ರಾಂತ್ಯಗಳಲ್ಲಿ ಬಹಳ ದಕ್ಷತೆಯಿಂದ ರಾಜಕಾರಣದಲ್ಲಿ ಕಾಂಗ್ರೆಸ್ ನೆಲೆಯೂರಿದ್ದರೂ, ಅದು ದೇಶಾದ್ಯಂತ ವ್ಯಾಪಿಸಲು ಈ ಬೆಳಗಾವಿ ಅಧಿವೇಶನ ಹೊಸ ದಿಕ್ಸೂಚಿಯನ್ನು ನೀಡಿತು ಎಂದರೆ ತಪ್ಪಾಗಲಾರದು.

ಮಹಾತ್ಮ ಗಾಂಧಿಯವರು ಕೇವಲ ರಾಜಕಾರಣಿಯಾಗಿರಲಿಲ್ಲ, ಅವರೊಬ್ಬ ಸಮಾಜ ಸುಧಾರಕರೂ ಆಗಿದ್ದರು.‌ ಹಾಗಾಗಿ ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕಾಂಗ್ರೆಸ್ಸನ್ನು ಕೇವಲ ರಾಜಕೀಯ ಪಕ್ಷವಾಗಿ ನೋಡದೆ, ಸಮಾಜ ಸುಧಾರಣೆಯ ಅಂಶಗಳನ್ನು ಅಳವಡಿಸಿದರು. ದೇಶದ ಪ್ರತಿ ಮನೆಮನೆಗೂ ಕಾಂಗ್ರೆಸ್ ಪಕ್ಷವನ್ನು ತಲುಪಿಸುವಲ್ಲಿ ಈ ಅಧಿವೇಶನ ಬಹುಮುಖ್ಯ ಪಾತ್ರವಹಿಸಿತು. ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿಗೂ ಕಾಂಗ್ರೆಸ್  ಕಾರ್ಯಕರ್ತರು ತಮ್ಮನ್ನು ತಾವು ಸ್ವಾತಂತ್ರ್ಯ ಚಳುವಳಿಗೆ ಸಮರ್ಪಿಸಿಕೊಂಡರು.

ಇಡೀ ಅಖಂಡ ಭಾರತದ ಉದ್ದಗಲಕ್ಕೂ ಪ್ರವಾಸ ಮಾಡಿದ ಗಾಂಧಿಯವರು, 18 ಬಾರಿ ಪ್ರವಾಸ ಮಾಡಿ, 122 ದಿನ ಕರ್ನಾಟಕದ ನೆಲದಲ್ಲಿ ಓಡಾಡಿದರು. ದೇಶದ ವಿವಿಧ ಜಾತಿ- ಧರ್ಮ- ಸಂಸ್ಕೃತಿ ಹಾಗೂ ಜನರ ಸಾಮಾಜಿಕ ಜೀವನವನ್ನು ಅಭ್ಯಾಸ ಮಾಡಿದ ಅವರು, “ಸ್ವಾತಂತ್ರ್ಯ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಭಾಷಾವಾರು ಪ್ರಾಂತ್ಯಗಳಾಗಬೇಕೆಂದು” ಘೋಷಣೆ ಮಾಡುವುದರ ಮೂಲಕ‌ ಅಂದೇ ಬಹುತ್ವ ಭಾರತಕ್ಕೆ ನಾಂದಿ ಹಾಡಿದರು. ಇದಲ್ಲದೇ ಅಸ್ಪೃಶ್ಯತೆ ನಿವಾರಣೆ, ಹಿಂದೂ- ಮುಸ್ಲಿಂ ಭಾತೃತ್ವ, ಸ್ವದೇಶಿ ಖಾದಿ ಬಳಕೆ ಹೀಗೆ ಹತ್ತು ಹಲವಾರು ನಿರ್ಣಯಗಳನ್ನು ಜಾರಿಗೆ ತಂದರು.

ಇಂದು ಕಾಂಗ್ರೆಸ್ಸಿನ ರಾಷ್ರ್ಟೀಯ ಅಧಿವೇಶನ ನೂರು ವರ್ಷ ಹಿಂದೆ ನೆಡೆದ ಸ್ಥಳದಲ್ಲಿ ನೆಡೆಯುತ್ತಿರುವುದು ಕೂಡ ಒಂದು ಐತಿಹಾಸಿಕ.‌ ಇಂದು ರಾಷ್ಟ್ರೀಯ ಕಾಂಗ್ರೇಸ್  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ  ಈ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಿರುವುದು ಕೂಡ ಮತ್ತೊಂದು ಮೈಲಿಗಲ್ಲು. ಕಾರಣ ನೂರು ವರ್ಷದ ಹಿಂದೆ ನೆಡೆದ ಸಭೆಯಲ್ಲಿ ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಂದಿನ ಸರ್ವಸಮ್ಮತದ ನಿರ್ಧಾರವಾಗಿತ್ತು.‌ ನೂರನೇ ವರ್ಷದ ಈ ದಿನದ ಅಧಿವೇಶನದಲ್ಲಿ ದಲಿತರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದದ್ದು ಕೂಡ ಅಭೂತಪೂರ್ವ ಕ್ಷಣವೆಂದರೆ ಅತಿಶಯೋಕ್ತಿ ಅಲ್ಲ.

ಹಾಗೆ ದೇಶದ ಆದರ್ಶ ಮಹಿಳೆ ಸೋನಿಯಾಗಾಂಧಿ , ಬಹುತ್ವ ಭಾರತದ ಭರವಸೆಯ ಜನನಾಯಕ ರಾಹುಲ್ ಗಾಂಧಿಯವರು, CWC ಸದಸ್ಯರು,ಸ್ರ್ತೀಶಕ್ತಿ ಬೆನ್ನೆಲುಬಾದ ಪ್ರಿಯಾಂಕಗಾಂಧಿ, ರಾಷ್ಟ್ರೀಯ ನಾಯಕರು, ಕರ್ನಾಟಕದ ಸೈದ್ಧಾತಿಕ ಮೇರುವ್ಯಕ್ತಿತ್ವದ ಜನನಾಯಕರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಹಾಗೂ ಎಲ್ಲಾ ಸಚಿವ ಸಂಪುಟದ ಸದಸ್ಯರು, ಶಾಸಕರು,ಸಂಸದರು, ವಿಧಾನಪರಿಷತ್ತು ರಾಜ್ಯಸಭಾ ಸದಸ್ಯರು, ರಾಷ್ಟ್ರೀಯ ಹಾಗೂ ರಾಜ್ಯ ಪಧಾಧಿಕಾರಿಗಳು, ಸೇವಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗಿಯಾದ ಎಲ್ಲರಿಗೂ ಶುಭಾಶಯಗಳು.

ಸ್ವಾತಂತ್ರ್ಯ ಭಾರತದ ನಂತರ ಈ ದೇಶಕ್ಕೆ ” ಗಾಂಧಿ ಭಾರತ” ಎಂದು ಹೆಸರಿಡಬೇಕು ಎಂದು ಸಮಾಜವಾದಿ ಲೋಹಿಯಾ ಅವರ ಅಪೇಕ್ಷೆಯಾಗಿತ್ತು. ಈ ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿಸಿ ಸ್ವತಂತ್ರ ತಂದುಕೊಟ್ಟ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಅದೆಷ್ಟು ಮುಖ್ಯವೋ, ಸ್ವಾತಂತ್ರ್ಯ ನಂತರದ ಭಾರತದ ಭವಿಷ್ಯಕ್ಕಾಗಿ ನಿರ್ಮಾಣವಾದ ಅಂಬೇಡ್ಕರ್ ನೇತೃತ್ವದ ಸಂವಿಧಾನ ಅಷ್ಟೇ ಮುಖ್ಯ. ಸ್ವಾತಂತ್ರ್ಯ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಂತೆ. ಭಾರತದ ಸಂವಿಧಾನ ಈ ದೇಶದ ಉದ್ದಗಲಕ್ಕೂ ಹರಿಯುವ ಮಹಾನದಿಯಾದರೆ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಸಂವಿಧಾನಶಿಲ್ಪಿ ಅಂಬೇಡ್ಕರ್ ಎರಡು ದಡಗಳು..

ಹೀಗಾಗಿ ಇಂದಿನ ರ್ಯಾಲಿಗೆ ” ಜೈ ಬಾಪೂ – ಜೈ ಭೀಮ್- ಜೈ ಸಂವಿಧಾನ್ ” ಹೆಸರು ಬಹಳ ಅರ್ಥಪೂರ್ಣವಾಗಿದೆ. ಮನುವಾದಿಗಳನ್ನು ನಿರ್ನಾಮ ಮಾಡಲು ಈ ಮೂರು ವಾಕ್ಯಗಳು ನಮ್ಮ ಕಾಂಗ್ರೆಸ್ಸಿನ  ಮುಂದಿನ ಘೋಷಣೆಗಳಾಗಬೇಕು.

“ಗಾಂಧಿ, ಭಾರತದ ಆತ್ಮವಾದರೆ- ಅಂಬೇಡ್ಕರ್ ದೇಶವೆಂಬ ದೇಹದಲ್ಲಿ ಹರಿದಾಡುವ ರಕ್ತ” ಇತಿಹಾಸದಲ್ಲಿ‌ ಆದ ಹಲವು ಕಹಿಘಟನೆಗಳನ್ನು ಮರೆತು, ನಮ್ಮ ಮುಂದಿನ ಭವಿಷ್ಯದ ಬಹುತ್ವಭಾರತಕ್ಕಾಗಿ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರದು.

ಒಂದು ವರ್ಷದ ” ಗಾಂಧಿ ಭಾರತ” ದ ರೂಪರೇಷೆಗಳು ವಿಭಿನ್ನವಾಗಿರಲಿ ಹಾಗೂ ಈ ಸುದಿನ ಅರ್ಥಪೂರ್ಣವಾಗಿ ಮುಂದಿನ ಭಾರತದ ನಿರ್ಮಾಣಕ್ಕೆ ಭದ್ರ ಭವಿಷ್ಯ ನಿರ್ಮಾಣ ಮಾಡುವ ಐತಿಹಾಸಿಕ ನಿರ್ಣಯಗಳು ಹೊರಹೊಮ್ಮಲಿ ಎಂದು ಆಶಿಸೋಣ.‌

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...