Homeಮುಖಪುಟಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

ಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

"ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ"

- Advertisement -
- Advertisement -

ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದರು.

ಸಾವರ್ಕರ್‌ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗಿದೆ. 2003ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿದ್ದಾಗ ಹೆಚ್ಚಿನ ರಾಜಕೀಯ ಪಕ್ಷಗಳು ಬಹಿಷ್ಕರಿಸಿದವು. ಆದರೆ ಅಂಡಮಾನ್ ಮತ್ತು ನಿಕೋಬಾರ್ ಜೈಲಿನಲ್ಲಿ ಅವರ ಹೆಸರಿನಲ್ಲಿದ್ದ ಫಲಕವನ್ನು ಸರ್ಕಾರ ಬದಲಾದ ಬಳಿಕ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.

“ನೀವು ಸಾವರ್ಕರ್‌ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು. ಆದರೆ ಅವರನ್ನು ಅಸಹ್ಯವಾಗಿ ನೋಡುವುದು ಸರಿಯಲ್ಲ. ಅವರ ರಾಷ್ಟ್ರೀಯ ಕೊಡುಗೆಗಳನ್ನು ಅವಹೇಳನ ಮಾಡುವ ಕ್ರಮವನ್ನು ಸಹಿಸಲಾಗುವುದಿಲ್ಲ” ಎಂದು ಸಿಂಗ್ ಎಚ್ಚರಿಸಿದ್ದಾರೆ.

“ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ. ಅವರು ಹಿಂದುತ್ವದೊಂದಿಗೆ ನಂಬಿಕೆ ಇಟ್ಟಿದ್ದರು. ವಾಸ್ತವವಾದಿಯಾಗಿದ್ದರು. ಏಕತೆಗೆ ಸಂಸ್ಕೃತಿಯ ಏಕರೂಪತೆ ಮುಖ್ಯ ಎಂದು ಅವರು ನಂಬಿದ್ದರು. ಅವರೊಬ್ಬ ವ್ಯಕ್ತಿಯಲ್ಲ, ಒಂದು ಸಿದ್ಧಾಂತ. ಅವರ ಅನುಯಾಯಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ” ಎಂದು ಹೇಳಿದರು.

 ಸಾವರ್ಕರ್‌- ವಿವೇಕಾನಂದರ ನಡುವೆ ವ್ಯತ್ಯಾಸವಿಲ್ಲ: ಭಾಗವತ್‌‌

ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ಕುರಿತ ಅಪಪ್ರಚಾರ ಸ್ವಾತಂತ್ರ್ಯ ನಂತರದಲ್ಲಿ ಆರಂಭವಾಯಿತು. ಸ್ವಾಮಿ ವಿವೇಕಾನಂದ, ಸ್ವಾಮಿ ದಯಾನಂದ ಸರಸ್ವತಿ ಮತ್ತು ಯೋಗಿ ಅರವಿಂದ್ ಅವರ ಖ್ಯಾತಿಯನ್ನು ಕೆಡಿಸುವುದು ಈ ವಿರೋಧಿಗಳ ಗುರಿಯಾಗಿತ್ತು. ಏಕೆಂದರೆ ಅವರು ಭಾರತೀಯ ರಾಷ್ಟ್ರೀಯತೆಯನ್ನು ಮುನ್ನೆಲೆಗೆ ತಂದವರಾಗಿದ್ದರು. ಸಾವರ್ಕರ್‌ ಮತ್ತು ವಿವೇಕಾನಂದರ ರಾಷ್ಟ್ರೀಯತೆಯ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಪ್ರತಿಪಾದಿಸಿದರು.

ಪುಸ್ತಕವನ್ನು ಪರಿಚಯಿಸುವಾಗ, ಔರಂಗಜೇಬನಂತಹ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡಬಾರದೆಂದು ವಾದಿಸಿದ ಮಹೂರ್ಕರ್ ಅವರ ಮಾತನ್ನು ಒಪ್ಪಿಕೊಂಡ ಭಾಗವತ್, “ಮಹೂರ್ಕರ್ ಹೇಳಿದ್ದನ್ನು, ನಾನು ಅವರನ್ನು 100 ಪ್ರತಿಶತ ಬೆಂಬಲಿಸುತ್ತೇನೆ” ಎಂದಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಹಿಂದೂ-ಮುಸ್ಲಿಂ ಏಕತೆಗೆ ಮೂಲಭೂತವಾದ ಮತ್ತು ವಹಾಬಿಸಂನಿಂದ ಅಪಾಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು. “ಬ್ರಿಟಿಷರು ತಮ್ಮ ವೈವಿಧ್ಯತೆಯ ಹೊರತಾಗಿಯೂ ಭಾರತೀಯರು ಒಗ್ಗೂಡಿ ನಮ್ಮನ್ನು ಹೊರಹಾಕಬಹುದು ಎಂದು ಅರಿತುಕೊಂಡರು. ಆದ್ದರಿಂದ ಅವರು ಮೂಲಭೂತವಾದದಿಂದಾಗಿ ರೂಪುಗೊಳ್ಳಲು ಆರಂಭಿಸಿದ ಬಿರುಕನ್ನು ವಿಸ್ತರಿಸಿದರು. ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿರುವಾಗ ಇದನ್ನು ಅನುಭವಿಸಿದರು. ಅವರು ಅಂಡಮಾನ್‌ನಿಂದ ಹಿಂದಿರುಗಿದ ನಂತರ ಅವರ ಹಿಂದುತ್ವ ಮಹಾಕಾವ್ಯವನ್ನು ಬರೆಯಲಾಗಿದೆ” ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಭಾರತದಲ್ಲಿ ಯಾವಾಗ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರಗಳಿವೆ ಎಂಬ ಧ್ವನಿಗಳು ಏಳಲಾರಂಭಿಸಿದವು, ಆಗ ಸಾವರ್ಕರ್‌‌, ರಾಷ್ಟ್ರೀಯತೆಯು ಧಾರ್ಮಿಕ ಭಿನ್ನತೆಗಳನ್ನು ಮೀರಿದ್ದು ಮತ್ತು ನಾವು ಭಿನ್ನವಾಗಿಲ್ಲ ಎಂದು ಕೂಗಬೇಕಾಯಿತು ಎಂದರು.

ರಾಜನಾಥ್‌ ಸಿಂಗ್‌ ಹೇಳಿಕೆಗೆ ಟೀಕೆ

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬುವವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...