Homeಮುಖಪುಟಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

ಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

"ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ"

- Advertisement -
- Advertisement -

ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದರು.

ಸಾವರ್ಕರ್‌ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗಿದೆ. 2003ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿದ್ದಾಗ ಹೆಚ್ಚಿನ ರಾಜಕೀಯ ಪಕ್ಷಗಳು ಬಹಿಷ್ಕರಿಸಿದವು. ಆದರೆ ಅಂಡಮಾನ್ ಮತ್ತು ನಿಕೋಬಾರ್ ಜೈಲಿನಲ್ಲಿ ಅವರ ಹೆಸರಿನಲ್ಲಿದ್ದ ಫಲಕವನ್ನು ಸರ್ಕಾರ ಬದಲಾದ ಬಳಿಕ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.

“ನೀವು ಸಾವರ್ಕರ್‌ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು. ಆದರೆ ಅವರನ್ನು ಅಸಹ್ಯವಾಗಿ ನೋಡುವುದು ಸರಿಯಲ್ಲ. ಅವರ ರಾಷ್ಟ್ರೀಯ ಕೊಡುಗೆಗಳನ್ನು ಅವಹೇಳನ ಮಾಡುವ ಕ್ರಮವನ್ನು ಸಹಿಸಲಾಗುವುದಿಲ್ಲ” ಎಂದು ಸಿಂಗ್ ಎಚ್ಚರಿಸಿದ್ದಾರೆ.

“ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ. ಅವರು ಹಿಂದುತ್ವದೊಂದಿಗೆ ನಂಬಿಕೆ ಇಟ್ಟಿದ್ದರು. ವಾಸ್ತವವಾದಿಯಾಗಿದ್ದರು. ಏಕತೆಗೆ ಸಂಸ್ಕೃತಿಯ ಏಕರೂಪತೆ ಮುಖ್ಯ ಎಂದು ಅವರು ನಂಬಿದ್ದರು. ಅವರೊಬ್ಬ ವ್ಯಕ್ತಿಯಲ್ಲ, ಒಂದು ಸಿದ್ಧಾಂತ. ಅವರ ಅನುಯಾಯಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ” ಎಂದು ಹೇಳಿದರು.

 ಸಾವರ್ಕರ್‌- ವಿವೇಕಾನಂದರ ನಡುವೆ ವ್ಯತ್ಯಾಸವಿಲ್ಲ: ಭಾಗವತ್‌‌

ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ಕುರಿತ ಅಪಪ್ರಚಾರ ಸ್ವಾತಂತ್ರ್ಯ ನಂತರದಲ್ಲಿ ಆರಂಭವಾಯಿತು. ಸ್ವಾಮಿ ವಿವೇಕಾನಂದ, ಸ್ವಾಮಿ ದಯಾನಂದ ಸರಸ್ವತಿ ಮತ್ತು ಯೋಗಿ ಅರವಿಂದ್ ಅವರ ಖ್ಯಾತಿಯನ್ನು ಕೆಡಿಸುವುದು ಈ ವಿರೋಧಿಗಳ ಗುರಿಯಾಗಿತ್ತು. ಏಕೆಂದರೆ ಅವರು ಭಾರತೀಯ ರಾಷ್ಟ್ರೀಯತೆಯನ್ನು ಮುನ್ನೆಲೆಗೆ ತಂದವರಾಗಿದ್ದರು. ಸಾವರ್ಕರ್‌ ಮತ್ತು ವಿವೇಕಾನಂದರ ರಾಷ್ಟ್ರೀಯತೆಯ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಪ್ರತಿಪಾದಿಸಿದರು.

ಪುಸ್ತಕವನ್ನು ಪರಿಚಯಿಸುವಾಗ, ಔರಂಗಜೇಬನಂತಹ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡಬಾರದೆಂದು ವಾದಿಸಿದ ಮಹೂರ್ಕರ್ ಅವರ ಮಾತನ್ನು ಒಪ್ಪಿಕೊಂಡ ಭಾಗವತ್, “ಮಹೂರ್ಕರ್ ಹೇಳಿದ್ದನ್ನು, ನಾನು ಅವರನ್ನು 100 ಪ್ರತಿಶತ ಬೆಂಬಲಿಸುತ್ತೇನೆ” ಎಂದಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಹಿಂದೂ-ಮುಸ್ಲಿಂ ಏಕತೆಗೆ ಮೂಲಭೂತವಾದ ಮತ್ತು ವಹಾಬಿಸಂನಿಂದ ಅಪಾಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು. “ಬ್ರಿಟಿಷರು ತಮ್ಮ ವೈವಿಧ್ಯತೆಯ ಹೊರತಾಗಿಯೂ ಭಾರತೀಯರು ಒಗ್ಗೂಡಿ ನಮ್ಮನ್ನು ಹೊರಹಾಕಬಹುದು ಎಂದು ಅರಿತುಕೊಂಡರು. ಆದ್ದರಿಂದ ಅವರು ಮೂಲಭೂತವಾದದಿಂದಾಗಿ ರೂಪುಗೊಳ್ಳಲು ಆರಂಭಿಸಿದ ಬಿರುಕನ್ನು ವಿಸ್ತರಿಸಿದರು. ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿರುವಾಗ ಇದನ್ನು ಅನುಭವಿಸಿದರು. ಅವರು ಅಂಡಮಾನ್‌ನಿಂದ ಹಿಂದಿರುಗಿದ ನಂತರ ಅವರ ಹಿಂದುತ್ವ ಮಹಾಕಾವ್ಯವನ್ನು ಬರೆಯಲಾಗಿದೆ” ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಭಾರತದಲ್ಲಿ ಯಾವಾಗ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರಗಳಿವೆ ಎಂಬ ಧ್ವನಿಗಳು ಏಳಲಾರಂಭಿಸಿದವು, ಆಗ ಸಾವರ್ಕರ್‌‌, ರಾಷ್ಟ್ರೀಯತೆಯು ಧಾರ್ಮಿಕ ಭಿನ್ನತೆಗಳನ್ನು ಮೀರಿದ್ದು ಮತ್ತು ನಾವು ಭಿನ್ನವಾಗಿಲ್ಲ ಎಂದು ಕೂಗಬೇಕಾಯಿತು ಎಂದರು.

ರಾಜನಾಥ್‌ ಸಿಂಗ್‌ ಹೇಳಿಕೆಗೆ ಟೀಕೆ

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬುವವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...