Homeಮುಖಪುಟಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

ಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

"ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ"

- Advertisement -
- Advertisement -

ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದರು.

ಸಾವರ್ಕರ್‌ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗಿದೆ. 2003ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿದ್ದಾಗ ಹೆಚ್ಚಿನ ರಾಜಕೀಯ ಪಕ್ಷಗಳು ಬಹಿಷ್ಕರಿಸಿದವು. ಆದರೆ ಅಂಡಮಾನ್ ಮತ್ತು ನಿಕೋಬಾರ್ ಜೈಲಿನಲ್ಲಿ ಅವರ ಹೆಸರಿನಲ್ಲಿದ್ದ ಫಲಕವನ್ನು ಸರ್ಕಾರ ಬದಲಾದ ಬಳಿಕ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.

“ನೀವು ಸಾವರ್ಕರ್‌ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು. ಆದರೆ ಅವರನ್ನು ಅಸಹ್ಯವಾಗಿ ನೋಡುವುದು ಸರಿಯಲ್ಲ. ಅವರ ರಾಷ್ಟ್ರೀಯ ಕೊಡುಗೆಗಳನ್ನು ಅವಹೇಳನ ಮಾಡುವ ಕ್ರಮವನ್ನು ಸಹಿಸಲಾಗುವುದಿಲ್ಲ” ಎಂದು ಸಿಂಗ್ ಎಚ್ಚರಿಸಿದ್ದಾರೆ.

“ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ. ಅವರು ಹಿಂದುತ್ವದೊಂದಿಗೆ ನಂಬಿಕೆ ಇಟ್ಟಿದ್ದರು. ವಾಸ್ತವವಾದಿಯಾಗಿದ್ದರು. ಏಕತೆಗೆ ಸಂಸ್ಕೃತಿಯ ಏಕರೂಪತೆ ಮುಖ್ಯ ಎಂದು ಅವರು ನಂಬಿದ್ದರು. ಅವರೊಬ್ಬ ವ್ಯಕ್ತಿಯಲ್ಲ, ಒಂದು ಸಿದ್ಧಾಂತ. ಅವರ ಅನುಯಾಯಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ” ಎಂದು ಹೇಳಿದರು.

 ಸಾವರ್ಕರ್‌- ವಿವೇಕಾನಂದರ ನಡುವೆ ವ್ಯತ್ಯಾಸವಿಲ್ಲ: ಭಾಗವತ್‌‌

ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ಕುರಿತ ಅಪಪ್ರಚಾರ ಸ್ವಾತಂತ್ರ್ಯ ನಂತರದಲ್ಲಿ ಆರಂಭವಾಯಿತು. ಸ್ವಾಮಿ ವಿವೇಕಾನಂದ, ಸ್ವಾಮಿ ದಯಾನಂದ ಸರಸ್ವತಿ ಮತ್ತು ಯೋಗಿ ಅರವಿಂದ್ ಅವರ ಖ್ಯಾತಿಯನ್ನು ಕೆಡಿಸುವುದು ಈ ವಿರೋಧಿಗಳ ಗುರಿಯಾಗಿತ್ತು. ಏಕೆಂದರೆ ಅವರು ಭಾರತೀಯ ರಾಷ್ಟ್ರೀಯತೆಯನ್ನು ಮುನ್ನೆಲೆಗೆ ತಂದವರಾಗಿದ್ದರು. ಸಾವರ್ಕರ್‌ ಮತ್ತು ವಿವೇಕಾನಂದರ ರಾಷ್ಟ್ರೀಯತೆಯ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಪ್ರತಿಪಾದಿಸಿದರು.

ಪುಸ್ತಕವನ್ನು ಪರಿಚಯಿಸುವಾಗ, ಔರಂಗಜೇಬನಂತಹ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡಬಾರದೆಂದು ವಾದಿಸಿದ ಮಹೂರ್ಕರ್ ಅವರ ಮಾತನ್ನು ಒಪ್ಪಿಕೊಂಡ ಭಾಗವತ್, “ಮಹೂರ್ಕರ್ ಹೇಳಿದ್ದನ್ನು, ನಾನು ಅವರನ್ನು 100 ಪ್ರತಿಶತ ಬೆಂಬಲಿಸುತ್ತೇನೆ” ಎಂದಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಹಿಂದೂ-ಮುಸ್ಲಿಂ ಏಕತೆಗೆ ಮೂಲಭೂತವಾದ ಮತ್ತು ವಹಾಬಿಸಂನಿಂದ ಅಪಾಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು. “ಬ್ರಿಟಿಷರು ತಮ್ಮ ವೈವಿಧ್ಯತೆಯ ಹೊರತಾಗಿಯೂ ಭಾರತೀಯರು ಒಗ್ಗೂಡಿ ನಮ್ಮನ್ನು ಹೊರಹಾಕಬಹುದು ಎಂದು ಅರಿತುಕೊಂಡರು. ಆದ್ದರಿಂದ ಅವರು ಮೂಲಭೂತವಾದದಿಂದಾಗಿ ರೂಪುಗೊಳ್ಳಲು ಆರಂಭಿಸಿದ ಬಿರುಕನ್ನು ವಿಸ್ತರಿಸಿದರು. ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿರುವಾಗ ಇದನ್ನು ಅನುಭವಿಸಿದರು. ಅವರು ಅಂಡಮಾನ್‌ನಿಂದ ಹಿಂದಿರುಗಿದ ನಂತರ ಅವರ ಹಿಂದುತ್ವ ಮಹಾಕಾವ್ಯವನ್ನು ಬರೆಯಲಾಗಿದೆ” ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಭಾರತದಲ್ಲಿ ಯಾವಾಗ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರಗಳಿವೆ ಎಂಬ ಧ್ವನಿಗಳು ಏಳಲಾರಂಭಿಸಿದವು, ಆಗ ಸಾವರ್ಕರ್‌‌, ರಾಷ್ಟ್ರೀಯತೆಯು ಧಾರ್ಮಿಕ ಭಿನ್ನತೆಗಳನ್ನು ಮೀರಿದ್ದು ಮತ್ತು ನಾವು ಭಿನ್ನವಾಗಿಲ್ಲ ಎಂದು ಕೂಗಬೇಕಾಯಿತು ಎಂದರು.

ರಾಜನಾಥ್‌ ಸಿಂಗ್‌ ಹೇಳಿಕೆಗೆ ಟೀಕೆ

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬುವವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...